ಚಾಮರಾಜನಗರ

ಸ್ಟೇರಿಂಗ್‌ ತುಂಡಾಗಿ ಕೆರೆಗೆ ಉರುಳಿದ ಸಾರಿಗೆ ಬಸ್‌…!

ಸರಗೂರು: ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ.

ಪಟ್ಟಣದಿಂದ ಯಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ ಸಮೀಪದ ಬೊಂತೇಗಾಲದ ಕೆರೆಗೆ ಉರುಳಿ ಬಿದ್ದಿರುವ ಘಟನೆ ನಡೆದಿದೆ.

ಸರಗೂರಿನಿಂದ ಕಾಡುಬೇಗೂರು-ಕುರ್ಣೆಗಾಲಕ್ಕೆ ಗುರುವಾರ ರಾತ್ರಿ ತೆರಳುತ್ತಿದ್ದ ಬಸ್(ಕೆಎ11ಎ- 0333)ನಲ್ಲಿ 25 ಮಂದಿ ತೆರಳುತ್ತಿದ್ದರು. ಇದರಲ್ಲಿ ನಾಲ್ಕು ಮಂದಿಗೆ ಗಂಭೀರ ಗಾಯವಾಗಿದೆ. ಚಾಲಕ ರವೀಶ್, ಕಂಡಕ್ಟರ್ ಗಣೇಶ್ ಸೇರಿದಂತೆ ಉಳಿದವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸರಗೂರಿನ ಸರ್ಕಾರಿ ಆಸ್ಪತ್ರೆ, ಎಚ್.ಡಿ.ಕೋಟೆ ಹಾಗೂ ಮೈಸೂರಿಗೆ ಸ್ಥಳಾಂತರಿಸಲಾಗಿದೆ.

ಸ್ಥಳೀಯರು ಹಾಗೂ ಪೊಲೀಸ್ ಸಿಬ್ಬಂದಿಗಳ ನೆರವಿನಿಂದ ಗಾಯಗಳನ್ನು ಬಸ್‌ನಿಂದ ಹೊರ ತೆಗೆದು ಆಸ್ಪತ್ರೆಗೆ ಕಳುಹಸಿಲಾಗಿದೆ. ಸ್ಥಳಕ್ಕೆ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಶರತ್, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಚಂದ್ರಶೇಖರ್ ಭೇಟಿ ನೀಡಿ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ಸರಗೂರು ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್, ಎಸ್‌ಐ ಅಶೋಕ್‌ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.

 

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

5 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

6 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

6 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

6 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

6 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

6 hours ago