ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ ಘಟನೆ ತಾಲ್ಲೂಕಿನ ಗರಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಹೇಶ್ ಎಂಬುವವರ ಮನೆಯ ಮೇಲೆ ಮರ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.




