ಗುಂಡ್ಲುಪೇಟೆ: ತಾಲ್ಲೂಕಿನ ಶ್ಯಾನಡ್ರಹಳ್ಳಿ-ಮೂಡಗೂರು ಗ್ರಾಮದ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಮೂಡಗೂರು ಗ್ರಾಮದ ನಾಗರಾಜಪ್ಪ ಎಂಬವರ ಕಬ್ಬಿನ ಗದ್ದೆಯಲ್ಲಿ ಅವಿತುಕೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದರು.
ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ಕಾಡಾನೆ ಎಲ್ಲಿಂದ ಬಂತು ಎಂಬುದು ತಿಳಿದುಬಂದಿಲ್ಲ. ಕೂಡಲೇ ಅರಣ್ಯ ಇಲಾಖೆ ಕಾಡಾನೆಯನ್ನು ಸೆರೆ ಹಿಡಿದು ರೈತರ ಫಸಲುಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಶ್ಯಾನಡ್ರಹಳ್ಳಿ ಗ್ರಾಮದ ಮುಖಂಡ ಮೃತ್ಯುಂಜಯರವರು ಒತ್ತಾಯಿಸಿದ್ದಾರೆ.
ಗುಂಡ್ಲುಪೇಟೆ ಬಫರ್ ಜೋನ್ ಎಸಿಎಫ್ ಸುರೇಶ್ ಕುಮಾರ್ ಮಾತನಾಡಿ, ಕಾಡಾನೆಯೊಂದು ಬಂದು ಕಬ್ಬಿನ ಗದ್ದೆಯೊಳಗೆ ಸೇರಿಕೊಂಡಿದ್ದು, ಮಧ್ಯಾಹ್ನದ ಸಮಯವಾದ ಕಾರಣ ರೈತರು, ಸಾರ್ವಜನಿಕರು ಜಮೀನಿನಲ್ಲಿ ಕೆಲಸ ಕಾರ್ಯ ಮಾಡುತ್ತಿರುತ್ತಾರೆ. ಕಾರ್ಯಾಚರಣೆ ಮಾಡಿದರೆ ಅಪಾಯ ಎದುರಾಗಬಹುದು. ಹಾಗಾಗಿ ಜಿಲ್ಲಾ ಕೇಂದ್ರದಿಂದ ಸಿಬ್ಬಂದಿ ಕರೆಸಿ ಕಾಡಾನೆ ಓಡಿಸಲು ತಂಡ ರಚಿಸಲಾಗಿದೆ. ಸಂಜೆಯ ನಂತರ ಅದನ್ನು ಹಿಮ್ಮೆಟ್ಟಿಸಲಾಗುವುದು ಎಂದರು.
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…