ಚಾಮರಾಜನಗರ

ನಿಧಿ ಆಸೆಗಾಗಿ ಮನೆಯಲ್ಲಿ 20 ಅಡಿ ಗುಂಡಿ ತೋಡಿದ ಮಹಿಳೆ

ಚಾಮರಾಜನಗರ : ಮಹಿಳೆಯೊಬ್ಬರು ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಮನೆಯಲ್ಲೆ ಗುಂಡಿ ತೋಡಿರುವ ಘಟನೆ ನಡೆದಿದೆ. ಆ ಗೃಹಿಣಿ ನಿಧಿ ಆಸೆಗಾಗಿ ಮನೆಯೊಳಗೆ ಬರೋಬ್ಬರಿ 20 ಅಡಿ ಆಳದ ಗುಂಡಿ ತೆಗೆದಿದ್ದಾರೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಸ್ತು ಸರಿ ಇಲ್ಲ ಎಂದು ಶಾಸ್ತ್ರ ಕೇಳಲು ಹೋಗಿದ್ದ ಗ್ರಾಮದ ಭಾಗ್ಯ ಎಂಬ ಮಹಿಳೆಗೆ ನಿಮ್ಮ ಮನೆಯಲ್ಲಿ ನಿಧಿ ಇದೆ ಎಂದು ಜ್ಯೋತಿಷಿ ನಂಬಿಸಿದ್ದಾನೆ.

ನಿಧಿ ಸಿಗಲು ಮನೆಯಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಜ್ಯೋತಿಷಿ ಮಹಿಳೆಯಿಂದ ಸಾವಿರಾರು ರೂಪಾಯಿ ವಸೂಲಿ ಮಾಡಿದ್ದಾನೆ. ಜ್ಯೋತಿಷಿ ಮಾತು ನಂಬಿ ಮಹಿಳೆಯು ಕಳಸ ಇಟ್ಟು ವಿಶೇಷ ಪೂಜೆ ಮಾಡಿಸಿದ್ದಾರೆ.

ಬಳಿಕ 3 ಅಡಿ ಅಗಲ 20 ಅಡಿ ಆಳದ ಗುಂಡಿ ತೆಗೆಸಿದ್ದಾರೆ. ನೆರೆಹೊರೆಯವರಿಗೆ ವಿಷಯ ಗೊತ್ತಾಗಿ ರಾಮಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ತೆರಳುವಷ್ಟರಲ್ಲಿ ಜ್ಯೋತಿಷಿ ಕಾಲ್ಕಿತ್ತಿದ್ದಾನೆ. ಕಳೆದೊಂದು ವಾರದ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

lokesh

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

7 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

8 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

9 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

9 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

10 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

11 hours ago