ಚಾಮರಾಜನಗರ : ಮಹಿಳೆಯೊಬ್ಬರು ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಮನೆಯಲ್ಲೆ ಗುಂಡಿ ತೋಡಿರುವ ಘಟನೆ ನಡೆದಿದೆ. ಆ ಗೃಹಿಣಿ ನಿಧಿ ಆಸೆಗಾಗಿ ಮನೆಯೊಳಗೆ ಬರೋಬ್ಬರಿ 20 ಅಡಿ ಆಳದ ಗುಂಡಿ ತೆಗೆದಿದ್ದಾರೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ವಿ.ಎಸ್.ದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಸ್ತು ಸರಿ ಇಲ್ಲ ಎಂದು ಶಾಸ್ತ್ರ ಕೇಳಲು ಹೋಗಿದ್ದ ಗ್ರಾಮದ ಭಾಗ್ಯ ಎಂಬ ಮಹಿಳೆಗೆ ನಿಮ್ಮ ಮನೆಯಲ್ಲಿ ನಿಧಿ ಇದೆ ಎಂದು ಜ್ಯೋತಿಷಿ ನಂಬಿಸಿದ್ದಾನೆ.
ನಿಧಿ ಸಿಗಲು ಮನೆಯಲ್ಲಿ ವಿಶೇಷ ಪೂಜೆ ಮಾಡಬೇಕೆಂದು ಜ್ಯೋತಿಷಿ ಮಹಿಳೆಯಿಂದ ಸಾವಿರಾರು ರೂಪಾಯಿ ವಸೂಲಿ ಮಾಡಿದ್ದಾನೆ. ಜ್ಯೋತಿಷಿ ಮಾತು ನಂಬಿ ಮಹಿಳೆಯು ಕಳಸ ಇಟ್ಟು ವಿಶೇಷ ಪೂಜೆ ಮಾಡಿಸಿದ್ದಾರೆ.
ಬಳಿಕ 3 ಅಡಿ ಅಗಲ 20 ಅಡಿ ಆಳದ ಗುಂಡಿ ತೆಗೆಸಿದ್ದಾರೆ. ನೆರೆಹೊರೆಯವರಿಗೆ ವಿಷಯ ಗೊತ್ತಾಗಿ ರಾಮಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ತೆರಳುವಷ್ಟರಲ್ಲಿ ಜ್ಯೋತಿಷಿ ಕಾಲ್ಕಿತ್ತಿದ್ದಾನೆ. ಕಳೆದೊಂದು ವಾರದ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…