ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್ಪೊಸ್ಟ್ ಹತ್ತಿರ ನಡೆದಿದೆ.
ಪುಣಜನೂರು ಗ್ರಾಮದ ಲೇಟ್ ಕುಂಬೇಗೌಡನ ಮಗ ಕೋಣೋರೆಗೌಡ (40 ವರ್ಷ) ಮೃತ ದುರ್ದೈವಿಯಾಗಿದ್ದಾರೆ.
ಈತ ಪುಣಜನೂರು ಚೆಕ್ಪೋಸ್ಟ್ ಬಳಿ ನಿಂತಿದ್ದಾಗ ಚೆಕ್ಪೋಸ್ಟ್ ಬಳಿಗೆ ಕಪ್ಪು ಶಿಲೆಗಳನ್ನು ತುಂಬಿಕೊಂಡ ಬಂದ ಲಾರಿಯನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ತಡೆದು ತಪಾಸಣೆ ಮಾಡಿದ್ದಾರೆ.
ಬಳಿಕ ಚಾಲಕ ಹೋಗುವ ಧಾವಂತದಲ್ಲಿ ಯುವಕ ನಿಂತಿರುವುದನ್ನು ನೋಡದೆ ಹೋಗಿರುವುದು ಅವಘಡಕ್ಕೆ ಕಾರಣ ಎನ್ನಲಾಗಿದೆ. ಲಾರಿಯ ಚಕ್ರಕ್ಕೆ ಸಿಲುಕಿದ ಯವಕನ ತಲೆ ಸಿಡಿದು ಚೆಲ್ಲಾಪಿಲ್ಲಿಯಾಗಿದೆ.
ತಕ್ಷಣ ಅಲ್ಲಿಯೇ ಇದ್ದ ಪೊಲೀಸರು ಲಾರಿಯನ್ನು ಜಪ್ತಿ ಮಾಡಿ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾರೆ.
ಯುವಕನ ಶವವನ್ನು ಚೀಲದಲ್ಲಿ ತುಂಬಿಕೊಂಡು ವೈದ್ಯಕೀಯ ಕಾಲೇಜು ಅಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟ ಯವಕನಿಗೆ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ವಿಷಯ ತಿಳಿದು ಸ್ಥಳಗಕ್ಕಾಮಿಸಿದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…