ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್ಪೊಸ್ಟ್ ಹತ್ತಿರ ನಡೆದಿದೆ.
ಪುಣಜನೂರು ಗ್ರಾಮದ ಲೇಟ್ ಕುಂಬೇಗೌಡನ ಮಗ ಕೋಣೋರೆಗೌಡ (40 ವರ್ಷ) ಮೃತ ದುರ್ದೈವಿಯಾಗಿದ್ದಾರೆ.
ಈತ ಪುಣಜನೂರು ಚೆಕ್ಪೋಸ್ಟ್ ಬಳಿ ನಿಂತಿದ್ದಾಗ ಚೆಕ್ಪೋಸ್ಟ್ ಬಳಿಗೆ ಕಪ್ಪು ಶಿಲೆಗಳನ್ನು ತುಂಬಿಕೊಂಡ ಬಂದ ಲಾರಿಯನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ತಡೆದು ತಪಾಸಣೆ ಮಾಡಿದ್ದಾರೆ.
ಬಳಿಕ ಚಾಲಕ ಹೋಗುವ ಧಾವಂತದಲ್ಲಿ ಯುವಕ ನಿಂತಿರುವುದನ್ನು ನೋಡದೆ ಹೋಗಿರುವುದು ಅವಘಡಕ್ಕೆ ಕಾರಣ ಎನ್ನಲಾಗಿದೆ. ಲಾರಿಯ ಚಕ್ರಕ್ಕೆ ಸಿಲುಕಿದ ಯವಕನ ತಲೆ ಸಿಡಿದು ಚೆಲ್ಲಾಪಿಲ್ಲಿಯಾಗಿದೆ.
ತಕ್ಷಣ ಅಲ್ಲಿಯೇ ಇದ್ದ ಪೊಲೀಸರು ಲಾರಿಯನ್ನು ಜಪ್ತಿ ಮಾಡಿ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾರೆ.
ಯುವಕನ ಶವವನ್ನು ಚೀಲದಲ್ಲಿ ತುಂಬಿಕೊಂಡು ವೈದ್ಯಕೀಯ ಕಾಲೇಜು ಅಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟ ಯವಕನಿಗೆ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ವಿಷಯ ತಿಳಿದು ಸ್ಥಳಗಕ್ಕಾಮಿಸಿದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…