ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್ಪೊಸ್ಟ್ ಹತ್ತಿರ ನಡೆದಿದೆ.
ಪುಣಜನೂರು ಗ್ರಾಮದ ಲೇಟ್ ಕುಂಬೇಗೌಡನ ಮಗ ಕೋಣೋರೆಗೌಡ (40 ವರ್ಷ) ಮೃತ ದುರ್ದೈವಿಯಾಗಿದ್ದಾರೆ.
ಈತ ಪುಣಜನೂರು ಚೆಕ್ಪೋಸ್ಟ್ ಬಳಿ ನಿಂತಿದ್ದಾಗ ಚೆಕ್ಪೋಸ್ಟ್ ಬಳಿಗೆ ಕಪ್ಪು ಶಿಲೆಗಳನ್ನು ತುಂಬಿಕೊಂಡ ಬಂದ ಲಾರಿಯನ್ನು ಅರಣ್ಯ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ತಡೆದು ತಪಾಸಣೆ ಮಾಡಿದ್ದಾರೆ.
ಬಳಿಕ ಚಾಲಕ ಹೋಗುವ ಧಾವಂತದಲ್ಲಿ ಯುವಕ ನಿಂತಿರುವುದನ್ನು ನೋಡದೆ ಹೋಗಿರುವುದು ಅವಘಡಕ್ಕೆ ಕಾರಣ ಎನ್ನಲಾಗಿದೆ. ಲಾರಿಯ ಚಕ್ರಕ್ಕೆ ಸಿಲುಕಿದ ಯವಕನ ತಲೆ ಸಿಡಿದು ಚೆಲ್ಲಾಪಿಲ್ಲಿಯಾಗಿದೆ.
ತಕ್ಷಣ ಅಲ್ಲಿಯೇ ಇದ್ದ ಪೊಲೀಸರು ಲಾರಿಯನ್ನು ಜಪ್ತಿ ಮಾಡಿ ಪೊಲೀಸ್ ಠಾಣೆಗೆ ತಂದು ನಿಲ್ಲಿಸಿದ್ದಾರೆ.
ಯುವಕನ ಶವವನ್ನು ಚೀಲದಲ್ಲಿ ತುಂಬಿಕೊಂಡು ವೈದ್ಯಕೀಯ ಕಾಲೇಜು ಅಸ್ಪತ್ರೆಗೆ ರವಾನಿಸಲಾಗಿದೆ. ಮೃತಪಟ್ಟ ಯವಕನಿಗೆ ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ವಿಷಯ ತಿಳಿದು ಸ್ಥಳಗಕ್ಕಾಮಿಸಿದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿತ್ತು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…