ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಹಾದಿಯಾಗಿ ಸರಿಯಾದ ಸಮಯಕ್ಕೆ ಅಧಿಕಾರಿಗಳು ಬಾರದ ಹಿನ್ನಲೆ ಸವಿತ ಸಮಾಜದ ಮುಖಂಡರು ಕಾರ್ಯಕ್ರಮ ಬಹಿಷ್ಕರಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಗುಂಡ್ಲುಪೇಟೆ ವತಿಯಿಂದ ಶ್ರೀಸವಿತಾ ಮಹರ್ಷಿ ಜಯಂತಿ ಆಚರಣಾ ಸಮಾರಂಭವನ್ನು ನಿಗದಿಗೊಳಿಸಲಾಗಿತ್ತು. ಆದರೆ ತಾಲ್ಲೂಕಿನ ಬಹುತೇಕ ಇಲಾಖೆಯ ಅಧಿಕಾರಿಗಳು ಗೈರು ಹಾಜರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮದಿಂದ ಹೊರ ನಡೆದು ತಾಲ್ಲೂಕು ಕಚೇರಿಯ ಮುಂಭಾಗ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಸವಿತಾ ಸಮಾಜದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶಿವಮೂರ್ತಿ ಮಾತನಾಡಿ, ತಾಲ್ಲೂಕಿನಲ್ಲಿ ಸವಿತಾ ಸಮಾಜದವರ ಕಾರ್ಯಕ್ರಮವಾದ, ಸವಿತಾ ಮಹರ್ಷಿ ಜಯಂತಿಗೆ ತಾಪಂ ಇಓ ಹೊರತುಪಡಿಸಿ ಎಲ್ಲಾ ಇಲಾಖೆ ಅಧಿಕಾರಿಗಳು ಗೈರಾಗಿದ್ದಾರೆ, ಈ ಮೂಲಕ ಸಮಾಜವನ್ನು ಕಡೆಗಣಿಸಲಾಗಿದೆ ಎಂದು ಕಿಡಿಕಾರಿದರು.
ಅಧಿಕಾರಿಗಳು ಸವಿತಾ ಸಮಾಜದವರ ಮೇಲೆ ತಾತ್ಸಾರ ಮನೋಭಾವನೆ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮಹರ್ಷಿ ಜಯಂತಿಗೆ ಗೈರಾಗಿ ಅಗೌರವ ತೋರಿರುವುದು ಖಂಡನೀಯ. ಶೀಘ್ರದಲ್ಲೇ ತಾಲ್ಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ವಿಠಲ್, ಉಪಾಧ್ಯಕ್ಷ ರಾಜು, ಹಂಗಳ ಹೋಬಳಿ ಅಧ್ಯಕ್ಷ ಸಿದ್ದಪ್ಪ, ತೆರಕಣಾಂಬಿ ಹೋಬಳಿ ಅಧ್ಯಕ್ಷ ಅಂಕಪ್ಪ, ಬೇಗೂರು ಹೋಬಳಿ ಅಧ್ಯಕ್ಷ ಸುರೇಶ್, ಕಸಬಾ ಹೋಬಳಿ ಅಧ್ಯಕ್ಷ ಮಹದೇವಶೆಟ್ಟಿ, ಮುಖಂಡರಾದ ರಾಜಣ್ಣ, ರವಿ, ಮಹದೇವಶೆಟ್ಟಿ, ಕೃಷ್ಣಪ್ಪ, ಗಣೇಶ್, ಸುರೇಶ್, ರಾಚ ಸೇರಿದಂತೆ ಸವಿತಾ ಸಮಾಜದ ಮುಖಂಡರು ಹಾಜರಿದ್ದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…
ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…
ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್ ಪೀಠದ ಕಡೆಗೆ ಪೇಪರ್ ಹರಿದು…
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…