ಚಾಮರಾಜನಗರ

ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳ ಗೈರು: ಮುಖಂಡರ ಆಕ್ರೋಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು 

ಗುಂಡ್ಲುಪೇಟೆ: ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಆಯೊಜಿಸಿದ್ದ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಹಾದಿಯಾಗಿ ಸರಿಯಾದ ಸಮಯಕ್ಕೆ ಅಧಿಕಾರಿಗಳು ಬಾರದ ಹಿನ್ನಲೆ ಸವಿತ ಸಮಾಜದ ಮುಖಂಡರು ಕಾರ್ಯಕ್ರಮ ಬಹಿಷ್ಕರಿಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಗುಂಡ್ಲುಪೇಟೆ ವತಿಯಿಂದ ಶ್ರೀಸವಿತಾ ಮಹರ್ಷಿ ಜಯಂತಿ ಆಚರಣಾ ಸಮಾರಂಭವನ್ನು ನಿಗದಿಗೊಳಿಸಲಾಗಿತ್ತು. ಆದರೆ ತಾಲ್ಲೂಕಿನ ಬಹುತೇಕ ಇಲಾಖೆಯ ಅಧಿಕಾರಿಗಳು ಗೈರು ಹಾಜರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮದಿಂದ ಹೊರ ನಡೆದು ತಾಲ್ಲೂಕು ಕಚೇರಿಯ ಮುಂಭಾಗ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

ಸವಿತಾ ಸಮಾಜದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪರಶಿವಮೂರ್ತಿ ಮಾತನಾಡಿ, ತಾಲ್ಲೂಕಿನಲ್ಲಿ ಸವಿತಾ ಸಮಾಜದವರ ಕಾರ್ಯಕ್ರಮವಾದ, ಸವಿತಾ ಮಹರ್ಷಿ ಜಯಂತಿಗೆ ತಾಪಂ ಇಓ ಹೊರತುಪಡಿಸಿ ಎಲ್ಲಾ ಇಲಾಖೆ ಅಧಿಕಾರಿಗಳು ಗೈರಾಗಿದ್ದಾರೆ, ಈ ಮೂಲಕ ಸಮಾಜವನ್ನು ಕಡೆಗಣಿಸಲಾಗಿದೆ ಎಂದು ಕಿಡಿಕಾರಿದರು.

ಅಧಿಕಾರಿಗಳು ಸವಿತಾ ಸಮಾಜದವರ ಮೇಲೆ ತಾತ್ಸಾರ ಮನೋಭಾವನೆ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಮಹರ್ಷಿ ಜಯಂತಿಗೆ ಗೈರಾಗಿ ಅಗೌರವ ತೋರಿರುವುದು ಖಂಡನೀಯ. ಶೀಘ್ರದಲ್ಲೇ ತಾಲ್ಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ಸವಿತಾ ಮಹರ್ಷಿ ಜಯಂತಿಯನ್ನು ಆಚರಣೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸವಿತಾ ಸಮಾಜದ ತಾಲ್ಲೂಕು ಅಧ್ಯಕ್ಷ ವಿಠಲ್, ಉಪಾಧ್ಯಕ್ಷ ರಾಜು, ಹಂಗಳ ಹೋಬಳಿ ಅಧ್ಯಕ್ಷ ಸಿದ್ದಪ್ಪ, ತೆರಕಣಾಂಬಿ ಹೋಬಳಿ ಅಧ್ಯಕ್ಷ ಅಂಕಪ್ಪ, ಬೇಗೂರು ಹೋಬಳಿ ಅಧ್ಯಕ್ಷ ಸುರೇಶ್, ಕಸಬಾ ಹೋಬಳಿ ಅಧ್ಯಕ್ಷ ಮಹದೇವಶೆಟ್ಟಿ, ಮುಖಂಡರಾದ ರಾಜಣ್ಣ, ರವಿ, ಮಹದೇವಶೆಟ್ಟಿ, ಕೃಷ್ಣಪ್ಪ, ಗಣೇಶ್, ಸುರೇಶ್, ರಾಚ ಸೇರಿದಂತೆ ಸವಿತಾ ಸಮಾಜದ ಮುಖಂಡರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

13 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

22 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

22 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

22 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

22 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

22 hours ago