ಚಾಮರಾಜನಗರ

ಲಾರಿ-ಟಿ.ಟಿ ವಾಹನ ನಡುವೆ ಅಪಘಾತ : 12ಕ್ಕೂ ಹೆಚ್ಚು ಮಂದಿಗೆ ಗಾಯ

ಹನೂರು : ಲಾರಿ ಮತ್ತು ಟಿಟಿ ವಾಹನದ ನಡುವೆ ಅಪಘಾತವಾಗಿದ್ದು, 12 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದ ಬಳಿ ಶನಿವಾರ ಮದ್ಯಾಹ್ನ ನಡೆದಿದೆ.

ತಾಲೂಕಿನ ಬೆಂಗಳೂರು ಮೂಲದ ಏಕನಾಥ್ ಟಿ.ಟಿ ವಾಹನ ಚಾಲಕನಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕೊಳ್ಳೇಗಾಲದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ವಿವರ 

ಬೆಂಗಳೂರು ಮೂಲದ ಟಿ.ಟಿ ವಾಹನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪೂಜೆ ಮುಗಿಸಿ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಹನೂರು ಕಡೆಯಿಂದ ಕೌದಳ್ಳಿ ಕಡೆಗೆ ಬರುತ್ತಿದ್ದ ಮಲ್ಲಯ್ಯನ ಪುರ ಬಳಿ ಲಾರಿ ಹಾಗೂ ಟಿ.ಟಿ ವಾಹನ ಏಕಾಏಕಿ ಮುಖಾ ಮುಖಿ ಡಿಕ್ಕಿಯಾಗಿ ಅಪಘಾತ ಉಂಟಾಗಿದೆ.ಇದರಿಂದ ಟಿ ಟಿ ವಾಹನ ಮುಂಭಾಗ ನಜ್ಜು ಗುಜ್ಜಾಗಿದ್ದು, ಲಾರಿಯ ಮುಂಭಾಗ ಸಹ ನಜ್ಜು ಗುಜ್ಜಾಗಿದೆ. ಅಲ್ಲದೇ ಟಿಟಿ ವಾಹನ ಚಾಲಕನಿಗೆ ಹೆಚ್ಚಿನ ಪ್ರಮಾಣದಲ್ಲಿ ಗಾಯಗಳಾಗಿದ್ದು, ಟಿಟಿ ವಾಹನದಲ್ಲಿದ್ದ 12 ಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಇದನ್ನು ಓದಿ:ಗೂಡ್ಸ್‌ ರೈಲು ಹಾಗೂ ಪ್ಯಾಸೆಂಜರ್‌ ರೈಲಿನ ನಡುವೆ ಅಪಘಾತ: 6 ಮಂದಿ ಪ್ರಯಾಣಿಕರು ಸಾವು

ಟ್ರಾಫಿಕ್ ಜಾಮ್ 

ಅಪಘಾತವಾದ ಸ್ಥಳದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಎರಡು ಬದಿಯಲ್ಲೂ ಸಹ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಳಿಕ ರಾಮಾಪುರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣ ಮಾಡಿ ಟ್ರಾಫಿಕ್ ಜಾಮ್ ನ್ನು ನಿಯಂತ್ರಣ ಮಾಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ರಾಮಾಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಈಶ್ವರ್ ಹಾಗೂ ತಂಡದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟು,ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

2 mins ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago