ಕೊಳ್ಳೇಗಾಲ : ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ರಸ್ತೆಯಲ್ಲಿ ಪಾದಚಾರಿ ಅಡ್ಡಬಂದಾಗ ಆಯಾತಪ್ಪಿ ಬಿದ್ದ ಬೈಕ್ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಬೈಕ್ ಸವಾರ ಹಾಗೂ ಪದಚಾರಿ ಗಂಭೀರವಾಗಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಮ.ಬೆಟ್ಟದಿಂದ ಪೂಜೆ ಮುಗಿಸಿ ವಾಪಸ್ಸು ಬರುವಾಗ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ: ಅಪಘಾತ : ಕೂಲಿಯಾಳು ಸಾವು, 6ಮಂದಿ ಕಾರ್ಮಿಕರು ಗಂಭೀರ
ಮೃತ್ತ ವ್ಯಕ್ತಿ ಮಳ್ಳವಳ್ಳಿ ತಾಲ್ಲೂಕು ರಾವಂದೂರು ಗ್ರಾಮದ ಮನೋಹರ್(18) ಎನ್ನಲಾಗಿದೆ. ಗಾಯಗೊಂಡ ಬೈಕ್ ಸವಾರ ಯಳಂದೂರು ತಾಲ್ಲೂಕಿನ ಮದ್ದೂರು ಗ್ರಾಮದ ರವಿಕುಮಾರ್ ಹಾಗೂ ಪಾದಚಾರಿ ಕಾಮಗೆರೆ ಗ್ರಾಮದ ಸುರೇಶ್ ಎಂದು ಗುರುತಿಸಲಾಗಿದೆ.
ಮೃತ್ತ ವ್ಯಕ್ತಿ ಹಾಗೂ ಬೈಕ್ ಸವಾರರು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ರಜಾದಿನವಾದ್ದರಿಂದ ಮ.ಬೆಟ್ಟಕ್ಕೆ ಬಂದು ದರ್ಶನ ಮುಗಿಸಿ ವಾಪಸ್ಸು ಹೋಗುವಾಗ ಈ ದುರಂತ ಜರುಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…
ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…
ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…
ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…
ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ.ಅರ್ಲೇಕರ್ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್ ಜೊತೆಗೆ ಅವರ…