ಮಹಾದೇಶ್ ಎಂ ಗೌಡ
ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಪಿ ಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಗುಡಿ ಸಮೀಪ ಜರುಗಿದೆ.
ಹನೂರು ತಾಲ್ಲೂಕಿನ ಬಸವನಗುಡಿ ಗ್ರಾಮದ ಸೋಲಿಗ ಸಮುದಾಯದ 17 ವರ್ಷದ ಅಪ್ಪು ಎಂಬಾತನೇ ಮೃತಪಟ್ಟ ಯುವಕನಾಗಿದ್ದಾನೆ.
ಘಟನೆಯ ವಿವರ: ಮಂಗಳವಾರ ಬೆಳಿಗ್ಗೆ ಟಿಬೆಟ್ ಕ್ಯಾಂಪ್ನಿಂದ ಬಸವನಗುಡಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡಿದ್ದ ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಖಾಸಗಿ ವಾಹನದ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…