Mysore
31
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ.

ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು 5 ಏಕರೆಯಲ್ಲಿ ರಾಗಿ ಫಸಲನ್ನು ಬೆಳೆದಿದ್ದರು. ಹಲವು ದಿನಗಳಿಂದ ಕಟಾವು ಮಾಡಿ ಒಕ್ಕಣೆ ಮಾಡಲು ಸಂಗ್ರಣೆ ಮಾಡಲಾಗಿತ್ತು. ಆದರೆ ಬುಧವಾರ ಸಂಜೆ ದಿಡೀರ್ ಬೆಂಕಿ ತಗುಲಿ ಸಂಪೂರ್ಣ ನಾಶವಾಗಿದೆ.

ಈ ವೇಳೆ ರೈತರು ಮಾತನಾಡಿ ಸುಮಾರು ಐದು ಏಕರೆಯಲ್ಲಿ ಸುಮಾರು 30 ಕ್ವೀಂಟಾಲ್ ರಾಗಿಯನ್ನು ಸಾಲ ಮಾಡಿ ಕಷ್ಟ ಪಟ್ಟು ಬೆಳೆಯಲಾಗಿತ್ತು ಆದರೆ ಬುಧವಾರ ಬೆಂಕಿ ತಗುಲಿ ಭಸ್ಮವಾಗಿದೆ. ಯಾರೋ ಕಿಡೀಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿಯನ್ನು ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

Tags:
error: Content is protected !!