ಚಾಮರಾಜನಗರ

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ.

ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು 5 ಏಕರೆಯಲ್ಲಿ ರಾಗಿ ಫಸಲನ್ನು ಬೆಳೆದಿದ್ದರು. ಹಲವು ದಿನಗಳಿಂದ ಕಟಾವು ಮಾಡಿ ಒಕ್ಕಣೆ ಮಾಡಲು ಸಂಗ್ರಣೆ ಮಾಡಲಾಗಿತ್ತು. ಆದರೆ ಬುಧವಾರ ಸಂಜೆ ದಿಡೀರ್ ಬೆಂಕಿ ತಗುಲಿ ಸಂಪೂರ್ಣ ನಾಶವಾಗಿದೆ.

ಈ ವೇಳೆ ರೈತರು ಮಾತನಾಡಿ ಸುಮಾರು ಐದು ಏಕರೆಯಲ್ಲಿ ಸುಮಾರು 30 ಕ್ವೀಂಟಾಲ್ ರಾಗಿಯನ್ನು ಸಾಲ ಮಾಡಿ ಕಷ್ಟ ಪಟ್ಟು ಬೆಳೆಯಲಾಗಿತ್ತು ಆದರೆ ಬುಧವಾರ ಬೆಂಕಿ ತಗುಲಿ ಭಸ್ಮವಾಗಿದೆ. ಯಾರೋ ಕಿಡೀಗೇಡಿಗಳು ಉದ್ದೇಶಪೂರ್ವಕವಾಗಿ ಬೆಂಕಿಯನ್ನು ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

44 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

51 mins ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

58 mins ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

1 hour ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

6 hours ago