ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಂಗನದೊಡ್ಡಿ ಗ್ರಾಮದ ಗೋವಿಂದ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಸಂಜೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಆಗಸ್ಟ್.2ರಂದು ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷಪ್ರಾಷನದಿಂದ ಹುಲಿಯೊಂದನ್ನು ಸಾಯಿಸಿ ಅದನ್ನು 3 ತುಂಡುಗಳಾಗಿ ಬೇರ್ಪಡಿಸಲಾಗಿತ್ತು. ಈ ಸಂಬಂಧ ಅರಣ್ಯಾಧಿಕಾರಿಗಳು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪಚ್ಚಮಲ್ಲು, ಸಿದ್ದು, ಸಂಪು, ಗಣೇಶ್, ಚಂದು ಹಾಗೂ ಅಭಿಷೇಕ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಇತ್ತೀಚೆಗಷ್ಟೇ ನಾಲ್ವರು ಆರೋಪಿಗಳಿಗೆ ಕೊಳ್ಳೇಗಾಲ ಜೆಎಂಎಫ್ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ನಾಪತ್ತೆಯಾಗಿದ್ದ ಆರೋಪಿ ಮರಿ ವೀರಪ್ಪನ್ ಎಂದೇ ಕುಖ್ಯಾತನಾಗಿದ್ದ ಗಂಗನದೊಡ್ಡಿ ಗ್ರಾಮದ ಗೋವಿಂದ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿತ್ತು. ಆದರೆ ಆತ 5 ತಿಂಗಳಿಂದ ತಲೆಮರೆಸಿಕೊಂಡಿದ್ದನು.
ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸೆರೆ: ಬುಧವಾರಮೈಸೂರು ನ್ಯಾಯಾಲಯಕ್ಕೆ ಕೇಸ್ವೊಂದರ ನಿಮಿತ್ತ ಆಗಮಿಸಿದ್ದ ಗೋವಿಂದನ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರು. ಆದರೆ ಈ ಬಗ್ಗೆ ತಿಳಿದ ಗೋವಿಂದ ತಪ್ಪಿಸಿಕೊಂಡು ರೈಲ್ವೆ ನಿಲ್ದಾಣಕ್ಕೆ ಹೊರಟಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಲವು ಪ್ರಕರಣಗಳಲ್ಲಿ ಭಾಗಿ: ಹುಲಿಯನ್ನು ಮೂರು ಪೀಸ್ ಮಾಡಿದ್ದ ಕೊಂದಿದ್ದ ಪ್ರಮುಖ ಆರೋಪಿ ಗೋವಿಂದನ ವಿರುದ್ಧ ರಾಮಾಪುರ ಠಾಣೆ ಹಾಗೂ ರಾಮಾಪುರ ವನ್ಯಜೀವಿ ವಲಯ ಮತ್ತು ಹನೂರು ಬಫರ್ ವಲಯ, ಹನೂರು ಠಾಣೆ, ಅರಣ್ಯ ಸಂಚಾರಿ ದಳದಲ್ಲಿ ಪ್ರಕರಣಗಳು ದಾಖಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಎಸಿಎಫ್ ವಿರಾಜ್ ಹೊಸೂರ್, ಆರ್ಎಫ್ಒಗಳಾದ ನಾಗರಾಜು, ಜೀತೇಂದ್ರ, ಮೈಸೂರು ಅಪರಾದ ಪತ್ತೆದಳದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…