ಚಾಮರಾಜನಗರ

ಹುಲಿಗೆ ವಿಷಪ್ರಾಷನ ಮಾಡಿದ್ದ ಆರೋಪಿ ಸೆರೆ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಂಗನದೊಡ್ಡಿ ಗ್ರಾಮದ ಗೋವಿಂದ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಸಂಜೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಆಗಸ್ಟ್.2ರಂದು ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷಪ್ರಾಷನದಿಂದ ಹುಲಿಯೊಂದನ್ನು ಸಾಯಿಸಿ ಅದನ್ನು 3 ತುಂಡುಗಳಾಗಿ ಬೇರ್ಪಡಿಸಲಾಗಿತ್ತು. ಈ ಸಂಬಂಧ ಅರಣ್ಯಾಧಿಕಾರಿಗಳು 7 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪಚ್ಚಮಲ್ಲು, ಸಿದ್ದು, ಸಂಪು, ಗಣೇಶ್, ಚಂದು ಹಾಗೂ ಅಭಿಷೇಕ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು. ಇತ್ತೀಚೆಗಷ್ಟೇ ನಾಲ್ವರು ಆರೋಪಿಗಳಿಗೆ ಕೊಳ್ಳೇಗಾಲ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ನಾಪತ್ತೆಯಾಗಿದ್ದ ಆರೋಪಿ ಮರಿ ವೀರಪ್ಪನ್ ಎಂದೇ ಕುಖ್ಯಾತನಾಗಿದ್ದ ಗಂಗನದೊಡ್ಡಿ ಗ್ರಾಮದ ಗೋವಿಂದ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿತ್ತು. ಆದರೆ ಆತ 5 ತಿಂಗಳಿಂದ ತಲೆಮರೆಸಿಕೊಂಡಿದ್ದನು.

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸೆರೆ: ಬುಧವಾರಮೈಸೂರು ನ್ಯಾಯಾಲಯಕ್ಕೆ ಕೇಸ್‌ವೊಂದರ ನಿಮಿತ್ತ ಆಗಮಿಸಿದ್ದ ಗೋವಿಂದನ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದರು. ಆದರೆ ಈ ಬಗ್ಗೆ ತಿಳಿದ ಗೋವಿಂದ ತಪ್ಪಿಸಿಕೊಂಡು ರೈಲ್ವೆ ನಿಲ್ದಾಣಕ್ಕೆ ಹೊರಟಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಲವು ಪ್ರಕರಣಗಳಲ್ಲಿ ಭಾಗಿ: ಹುಲಿಯನ್ನು ಮೂರು ಪೀಸ್ ಮಾಡಿದ್ದ ಕೊಂದಿದ್ದ ಪ್ರಮುಖ ಆರೋಪಿ ಗೋವಿಂದನ ವಿರುದ್ಧ ರಾಮಾಪುರ ಠಾಣೆ ಹಾಗೂ ರಾಮಾಪುರ ವನ್ಯಜೀವಿ ವಲಯ ಮತ್ತು ಹನೂರು ಬಫರ್ ವಲಯ, ಹನೂರು ಠಾಣೆ, ಅರಣ್ಯ ಸಂಚಾರಿ ದಳದಲ್ಲಿ ಪ್ರಕರಣಗಳು ದಾಖಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸಿಎಫ್ ವಿರಾಜ್ ಹೊಸೂರ್, ಆರ್‌ಎಫ್‌ಒಗಳಾದ ನಾಗರಾಜು, ಜೀತೇಂದ್ರ, ಮೈಸೂರು ಅಪರಾದ ಪತ್ತೆದಳದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

41 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago