ಚಾಮರಾಜನಗರ

ಅದ್ದೂರಿಯಾಗಿ ನಡೆದ ಮಲೆಮಹದೇಶ್ವರ ಬೆಟ್ಟದ ಜಾತ್ರೆ

 ಚಾಮರಾಜನಗರ : ಪ್ರಸಿದ್ಧ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ರಥೋತ್ಸವ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿಅದ್ಧೂರಿಯಾಗಿ ನೆರವೇರಿತು.
ದೀಪಾವಳಿ ಹಬ್ಬದ ಬಲಿಪಾಡ್ಯಮಿ ಹಾಗೂ ಅಮಾವಾಸ್ಯೆ ಅಂಗವಾಗಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬೆಳಗ್ಗೆ 9.15ಕ್ಕೆ ರಥಕ್ಕೆ ಚಾಲನೆ ಕೊಟ್ಟರು.

ಉಘೇ ಮಾದಪ್ಪ, ಮಾಯಕಾರ ಮಾದಪ್ಪ ಎಂಬ ಲಕ್ಷಾಂತರ ಧ್ವನಿಗಳ ಮೂಲಕ ಎಲ್ಲರ ಮೈ ರೋಮಾಂಚನಗೊಳಿಸಿತು. ಅಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉತ್ಸಾಹದಿಂದ ರಥ ಎಳೆದು ಇಷ್ಟರ್ಥಕ್ಕಾಗಿ ಪ್ರಾರ್ಥಿಸಿದರು.

ರಾಜ್ಯದ ಮೂಲೆ – ಮೂಲೆಗಳಿಂದ ಲಕ್ಷಾಂತರ ಮಂದಿ ಭಕ್ತಾದಿಗಳು ಆಗಮಿಸಿದ್ದು, ಕಳೆದ 4 ದಿನಗಳಿಂದ ಲಕ್ಷ- ಲಕ್ಷ ಮಂದಿ ಭಕ್ತರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಸ್ವಾಮಿ ದರ್ಶನ ಪಡೆದಿದ್ದಾರೆ.
ಮಹದೇಶ್ವರನ ಪ್ರಸಾದವಾದ ಲಾಡು ಕಳೆದ 2 ದಿನದಿಂದ ಎರಡೂವರೆ ಲಕ್ಷಕ್ಕೂ ಹೆಚ್ಚು ಲಾಡು ಮಾರಾಟವಾಗಿದೆ.

 

andolana

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

3 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

4 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

4 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

4 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

5 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

14 hours ago