ಚಾಮರಾಜನಗರ

ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಲು ಆಗ್ರಹಿಸಿ ಎಐಯುಟಿಯುಸಿ ಪ್ರತಿಭಟನೆ !

ಚಾಮರಾಜನಗರ: ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ಪಶ್ನಿಸಿದ ಕಾರಣಕ್ಕೆ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್‌) ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಪದಾಧಿಕಾರಿಗಳು ಮತ್ತು ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಅಸ್ಪತ್ರೆಯ ಮುಂಭಾಗದಲ್ಲಿ ಧರಣಿ ಕುಳಿತ ಪ್ರತಿಭಟನಕಾರರು ಸಿಮ್ಸ್‌, ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಸಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ನೌಕರರು ನೇಮಕ ಮಾಡಿಕೊಳ್ಳುವಾಗ ಬಹಳ ಶೋಷಣೆ ನಡೆಯುತ್ತಿದೆ. ನೌಕರರಿಗೆ ಸರಿಯಾಗಿ ಸಂಬಳ ನೀಡುವುದಿಲ್ಲ. ಹೆಚ್ಚು ದುಡಿಸಿಕೊಳ್ಳುವುದು ಸೇರಿದಂತೆ ಕಾರ್ಮಿಕ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಲಾಗುತ್ತಿದೆ.

ಈ ಬಗ್ಗೆ ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ತಪ್ಪಿಸಲು ಮುಂದಾಗ ನೌಕರನ್ನೇ ವಜಾಗೊಳಿಸಲಾಗಿದೆ. ಈ ನೌಕರನ್ನು ವಾಪಸ್ ಕೆಲಸಕ್ಕೆ ತೆಗೆದುಕೊಳ್ಳುವಂತೆ ಒತ್ತಾಯ ಮಾಡುತ್ತಾ ಬಂದಿದ್ದರೂ ಸಹ ಸಿಮ್ಸ್ ಹಾಗೂ ಟೆಂಡರ್ ದಾರರು ಸೊಪ್ಪು ಹಾಕುತ್ತಿಲ್ಲ’ ಎಂದು ದೂರಿದರು.

ಉಪ ಕಾರ್ಮಿಕರ ಆಯುಕ್ತರ ಆದೇಶದಂತೆ ಐದು ಜನ ಕಾರ್ಮಿಕರ ಮೂರು ತಿಂಗಳ ವೇತನವನ್ನು ತಕ್ಷಣವೇ ಪಾವತಿ ಮಾಡಬೇಕು. ಮತ್ತು ಆದೇಶದಂತೆ ಶುಶ್ರೂಷಕರ ವೇತನವನ್ನು ಪಾವತಿ ಮಾಡಬೇಕು.

ಕೋವಿಡ್‌ ವಾರಿಯರ್ಸ್‌ ಆಗಿ ಕೆಲಸ ಮಾಡಿದ ಶುಶ್ರೂಷಕರಾದ ಪೂರ್ಣಿಮಾ ಮತ್ತು ರಂಜಿತಾ ಅವರಿಗೆ ಹೆರಿಗೆ ರಜಾ ಕಾರಣಕ್ಕೆ ಕೆಲಸ ನಿರಾಕರಿಸಿದ್ದು, ತಕ್ಷಣವೇ ಕಾರ್ಮಿಕರ ಅಧಿಕಾರಿಗಳ ಮುಂದೆ ಒಪ್ಪಿಗೊಂಡಂತೆ ಕೆಲಸ ನೀಡಬೇಕು’ ಎಂದು ಆಗ್ರಹಿಸಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

3 mins ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

5 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

8 mins ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

14 mins ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

19 mins ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

29 mins ago