ಚಾಮರಾಜನಗರ: ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ಪಶ್ನಿಸಿದ ಕಾರಣಕ್ಕೆ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಪದಾಧಿಕಾರಿಗಳು ಮತ್ತು ಸದಸ್ಯರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾ ಅಸ್ಪತ್ರೆಯ ಮುಂಭಾಗದಲ್ಲಿ ಧರಣಿ ಕುಳಿತ ಪ್ರತಿಭಟನಕಾರರು ಸಿಮ್ಸ್, ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
‘ಸಿಮ್ಸ್ ಆಸ್ಪತ್ರೆಯಲ್ಲಿ ಗುತ್ತಿಗೆ ನೌಕರರು ನೇಮಕ ಮಾಡಿಕೊಳ್ಳುವಾಗ ಬಹಳ ಶೋಷಣೆ ನಡೆಯುತ್ತಿದೆ. ನೌಕರರಿಗೆ ಸರಿಯಾಗಿ ಸಂಬಳ ನೀಡುವುದಿಲ್ಲ. ಹೆಚ್ಚು ದುಡಿಸಿಕೊಳ್ಳುವುದು ಸೇರಿದಂತೆ ಕಾರ್ಮಿಕ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಲಾಗುತ್ತಿದೆ.
ಈ ಬಗ್ಗೆ ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ತಪ್ಪಿಸಲು ಮುಂದಾಗ ನೌಕರನ್ನೇ ವಜಾಗೊಳಿಸಲಾಗಿದೆ. ಈ ನೌಕರನ್ನು ವಾಪಸ್ ಕೆಲಸಕ್ಕೆ ತೆಗೆದುಕೊಳ್ಳುವಂತೆ ಒತ್ತಾಯ ಮಾಡುತ್ತಾ ಬಂದಿದ್ದರೂ ಸಹ ಸಿಮ್ಸ್ ಹಾಗೂ ಟೆಂಡರ್ ದಾರರು ಸೊಪ್ಪು ಹಾಕುತ್ತಿಲ್ಲ’ ಎಂದು ದೂರಿದರು.
ಉಪ ಕಾರ್ಮಿಕರ ಆಯುಕ್ತರ ಆದೇಶದಂತೆ ಐದು ಜನ ಕಾರ್ಮಿಕರ ಮೂರು ತಿಂಗಳ ವೇತನವನ್ನು ತಕ್ಷಣವೇ ಪಾವತಿ ಮಾಡಬೇಕು. ಮತ್ತು ಆದೇಶದಂತೆ ಶುಶ್ರೂಷಕರ ವೇತನವನ್ನು ಪಾವತಿ ಮಾಡಬೇಕು.
ಕೋವಿಡ್ ವಾರಿಯರ್ಸ್ ಆಗಿ ಕೆಲಸ ಮಾಡಿದ ಶುಶ್ರೂಷಕರಾದ ಪೂರ್ಣಿಮಾ ಮತ್ತು ರಂಜಿತಾ ಅವರಿಗೆ ಹೆರಿಗೆ ರಜಾ ಕಾರಣಕ್ಕೆ ಕೆಲಸ ನಿರಾಕರಿಸಿದ್ದು, ತಕ್ಷಣವೇ ಕಾರ್ಮಿಕರ ಅಧಿಕಾರಿಗಳ ಮುಂದೆ ಒಪ್ಪಿಗೊಂಡಂತೆ ಕೆಲಸ ನೀಡಬೇಕು’ ಎಂದು ಆಗ್ರಹಿಸಿದರು
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…