ಚಾಮರಾಜನಗರ

ಅಜ್ಜೀಪುರದಿಂದ ಶಕ್ತಿಸೌಧಕ್ಕೆ ಪಾದಯಾತ್ರೆ : ರೈತ ಸಂಘಟನೆಗಳ ಬೆಂಬಲಕ್ಕೆ ಮನವಿ

ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ ಡಿ.ಪಿ.ಆರ್ ಗೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಜಿಲ್ಲಾವಾರು ರೈತ ಸಂಘಟನೆಗಳು ಬೆಂಬಲ ನೀಡಬೇಕು ಎಂದು ಹನೂರು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಮನವಿ ಮಾಡಿದ್ದಾರೆ.

ಮಳವಳ್ಳಿ, ಕೆ ಎಂ ದೊಡ್ಡಿ, ಮದ್ದೂರು, ಚೆನ್ನಪಟ್ಟಣ,ರಾಮನಗರ, ಬಿಡದಿ, ತಾಲೂಕು ಘಟಕದ ರೈತರು ಹಾಗೂ ಪದಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ನಂತರ ಮಾತನಾಡಿದರು.

ಫೆಬ್ರವರಿ 25ರಂದು ಹನೂರು ತಾಲೂಕಿನ ಅಜ್ಜೀಪುರ ಗ್ರಾಮದಿಂದ ಬೆಂಗಳೂರಿನ ವಿಧಾನಸೌಧದ ವರೆಗೆ ಪಾದಯಾತ್ರೆ ಹೊರಡಲಿದೆ ಪ್ರಾರಂಭದಲ್ಲಿ ಒಂದು ಸಾವಿರಕ್ಕೂ ಹೆಚ್ಚು ರೈತರು ಪಾಲ್ಗೊಳ್ಳಲಿದ್ದಾರೆ ನಂತರ 300ಕ್ಕೂ ಹೆಚ್ಚು ರೈತರು ನಿರಂತರವಾಗಿ ಪ್ರತಿಭಟನೆ ಮಾಡಲಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪದಾಧಿಕಾರಿಗಳು ಸಹಕಾರ ನೀಡಲಿದ್ದಾರೆ. ಈ ಪಾದಯಾತ್ರೆಯಲ್ಲಿ ಸಾರ್ವಜನಿಕರು ಸಹ ಪಾಲ್ಗೊಳ್ಳುವ ಮೂಲಕ ಪಾದಯಾತ್ರೆಯನ್ನು ಯಶಸ್ವಿ ಮಾಡಬೇಕೆಂದು ಮನವಿ ಮಾಡಿದರು.

ಜಿಲ್ಲಾ ಸಂಘಟನೆ ಮೂಲಕ ಸಹಕಾರ
ಪಾದಯಾತ್ರೆ ಬರುವ ಸಂದರ್ಭದಲ್ಲಿ ಆಯಾಯ ತಾಲೂಕು, ಜಿಲ್ಲಾ ಘಟಕಗಳ ಪದಾಧಿಕಾರಿಗಳು ರೈತ ಮುಖಂಡರುಗಳು ಹೆಚ್ಚಿನ ಜವಾಬ್ದಾರಿಯನ್ನು ವಹಿಸಿ ಪಾದಯಾತ್ರೆ ಬರುವಂತಹ ರೈತ ಬಂಧುಗಳಿಗೆ ನೆರವಾಗುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ ಎಂದು ತಾಲೂಕು ಘಟಕದ ಅಧ್ಯಕ್ಷ ಅಮ್ಜದ್ ಖಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದೆ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ಹನೂರು ತಾಲೂಕು ಗೌರವ ಅಧ್ಯಕ್ಷ ರಾಜಣ್ಣ, ಕೆ ಎಂ ದೊಡ್ಡಿ ಜಿಲ್ಲಾ ಖಚಾoಚಿ ರವಿಕುಮಾರ್,ಸೇರಿದಂತೆ ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago