ಚಾಮರಾಜನಗರ

ಅಜ್ಜೀಪುರದಿಂದ ಬೆಂಗಳೂರಿಗೆ ಪಾದಯಾತ್ರೆ: ಸಿದ್ದರಾಮಯ್ಯಗೆ ಮನವಿ ಸಲ್ಲಿಸಿ ಪ್ರತಿಭಟನೆ ಕೈಬಿಟ್ಟ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ ಮೂಲಕ 1.31 ಟಿಎಂಸಿ ನೀರು ಒದಗಿಸಲು 2020-21 ಸಾಲಿನಲ್ಲಿ ಕ್ರಿಯೆ ಯೋಜನೆ ಮಾಡಲಾಗಿದ್ದ ಡಿಪಿಆ‌ರ್ ಗೆ ಅನುಮತಿ ದೊರಕಿದ್ದು, ಬಜೆಟ್‌ನಲ್ಲಿ ಅನುದಾನ ನೀಡಬೇಕೆಂದು ಒತ್ತಾಯಿಸಿ ಹನೂರು ಕರ್ನಾಟಕ ರಾಜ್ಯ ರೈತ ಸಂಘ ಹಮ್ಮಿಕೊಂಡಿದ್ದ ಪಾದಯಾತ್ರೆಯು ಐದು ದಿನಗಳ ಬಳಿಕ ಬೆಂಗಳೂರು ತಲುಪಿತು.

ಹನೂರು ತಾಲ್ಲೂಕಿನ ಪ್ರಮುಖ ಜಲಾಶಯಗಳು ಹಾಗೂ ಕೆರೆಕಟ್ಟೆಗಳಿಗೆ ನೀರು ತುಂಬಿಸಲು ಅನುಮತಿ ದೊರಕಿರುವ ಡಿಪಿಆರ್ ಪ್ರಕಾರ ಕಾವೇರಿ ನದಿಯಿಂದ ಏತ ನೀರಾವರಿ ಮೂಲಕ ನೀರು ಹರಿಸುವಂತೆ ಒತ್ತಾಯಿಸಿ ಹಾಗೂ ಗೋಪಿನಾಥಂ ಗ್ರಾಪಂ ವ್ಯಾಪ್ತಿಯ ಅರಣ್ಯದೊಳಗೆ ಇರುವ ಗ್ರಾಮಗಳಿಗೆ ಮೂಲಭೂತ ಸೌಕರ್ಯ ನೀಡುವಂತೆ ರೈತ ಸಂಘ ಒತ್ತಾಯಿಸಿ ಮಾರ್ಚ್.25ರಂದು ಅಜ್ಜಿಪುರದ ಗ್ರಾಮದಿಂದ ಬೆಂಗಳೂರು ವಿಧಾನಸೌಧದವರೆಗೂ ಪಾದಯಾತ್ರೆ ಚಳುವಳಿ ಹಮ್ಮಿಕೊಂಡಿದ್ದರು.

ಹನೂರು ತಾಲ್ಲೂಕಿನ ಮಣಗಳ್ಳಿ, ಬಂಡಳ್ಳಿ, ಹಲಗಾಪುರ, ಮಾರ್ಟಳ್ಳಿ, ಕೀರಾಪಾತಿ, ಹಾಲೇರಿ ಕೆರೆ, ಹೂಗ್ರಂ, ಮಿಣ್ಣಂ ಜಲಾಶಯ, ಸೇರಿದಂತೆ ಕೆರೆಕಟ್ಟೆಗಳಿಗೆ ಕಾವೇರಿ ನದಿಯ ಸತ್ತೇಗಾಲದ ಸಮೀಪದ ಸರಗೂರು ಗ್ರಾಮದಿಂದ ಏತ ನೀರಾವರಿ ಮೂಲಕ ನೀರನ್ನು ತುಂಬಿಸಲು ಡಿಪಿಆರ್‌ಗೆ ಅನುಮತಿ ದೊರಕಿದ್ದು 419 ಕೋಟಿಯ ಪರಿಷ್ಕೃತ ಡಿಪಿಆರ್‌ನಲ್ಲಿ ಮಾರ್ಟಳ್ಳಿ, ಕುರಟ್ಟಿಹೊಸೂರು, ಕೌದಳ್ಳಿ, ಶೆಟ್ಟಿಹಳ್ಳಿ, ರಾಮಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಜಮೀನುಗಳನ್ನು ನೀರು ಒದಗಿಸಲು ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು ಸರ್ಕಾರವು ತಕ್ಷಣವೇ ಹಣ ಬಿಡುಗಡೆ ರೈತರು ಗೂಳೆ ಹೋಗುವುದನ್ನು ತಪ್ಪಿಸಬೇಕು. ಗೋಪಿನಾಥಂ ಗ್ರಾಪಂ ವ್ಯಾಪ್ತಿಯ ಅರಣ್ಯ ಗ್ರಾಮಗಳಾದ ಆಲಂಬಾಡಿ, ಜಂಬೂರ್ ಪಟ್ಟಿ, ಮಾರಿಕೋಟೆ, ಪುದುಕೋಟೆ, ಅಪ್ಪುಕಾಂಪಟ್ಟಿ, ಪುಂಗಾತ್ತೂರು, ತೆಂಗಾಯ್ ಕೊಂಬು ಗ್ರಾಮಗಳು ಪಾರಂಪರಿಕ ಅರಣ್ಯ ವಾಸಿಗಳಿಗೆ ವಿದ್ಯುತ್, ಕುಡಿಯುವ ನೀರು ಸುಸಜ್ಜಿತ ರಸ್ತೆ, ಹಕ್ಕುಪತ್ರ ಇಲ್ಲದವರಿಗೆ ಯಾವುದೇ ಸರ್ಕಾರವು ಇಲ್ಲಿಯವರೆಗೂ ನೀಡಿರುವುದಿಲ್ಲ. ರಾಜ್ಯ ಸರ್ಕಾರ ನೀಡಬೇಕೆಂದು ತುರ್ತು ಹಕ್ಕು ಪತ್ರಗಳನ್ನು ನೀಡುವಂತೆ ಹಾಗೂ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಅಜ್ಜಿಪುರದಿಂದ ಬೆಂಗಳೂರು ವಿಧಾನಸೌಧದವರೆಗೂ ಪಾದಯಾತ್ರೆ ಮಾಡಿದ್ದರು.

ಸೋಮವಾರ ಪಾದಯಾತ್ರೆಗೆ ಬೆಂಗಳೂರಿಗೆ ತೆರಳುವ ರೈತರನ್ನು ಬೆಂಗಳೂರು ಕುಂಬಳಗೂಡಿನಲ್ಲೇ ಪೊಲೀಸರು ತಡೆದು ವಾಹನಗಳ ಮೂಲಕ ಪಾದಯಾತ್ರೆ ರೈತರನ್ನು ಬೆಂಗಳೂರು ಪ್ರೀಡಂ ಪಾರ್ಕ್‌ನಲ್ಲಿ ಇರಿಸಿ ಶಕ್ತಿಸೌಧದಲ್ಲಿ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರೈತ ಸಂಘದ ಪಾದಯಾತ್ರಿಗಳನ್ನು ಅಲ್ಲಿಗೆ ಕರೆಯಿಸಿ ಮನವಿ ಪತ್ರವನ್ನು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಪ್ರಧಾನ ಕಾರ್ಯದರ್ಶಿ ಎನ್.ಡಿ.ವಸಂತ್ ಕುಮಾರ್, ರಾಜ್ಯ ಕಾರ್ಯದರ್ಶಿ ಮಹದೇವ ಪ್ರಭು, ರಾಜ್ಯ ಕಾಯಂ ಸದಸ್ಯ ಮಹೇಶ್ ಕುಮಾರ್, ಮಹಿಳಾ ವಿಭಾಗದ ಕಾರ್ಯದರ್ಶಿಗಳಾದ ನೇತ್ರಾವತಿ, ರಮ್ಯರಾಮಣ್ಣ, ಚಾಮರಾಜನಗರ ರೈತ ಸಂಘದ ಉಪಾಧ್ಯಕ್ಷರಾದ ಗೌಡೇಗೌಡ, ಲೋಕೇಶ್ ಗೌಡ.ಹನೂರು ತಾಲ್ಲೂಕು ಅಧ್ಯಕ್ಷ ಅಮ್ಜದ್ ಖಾನ್, ಮಹಿಳಾ ಘಟಕದ ಅಧ್ಯಕ್ಷೆ ರಾಜಮಣಿ, ಅಜ್ಜಿಪುರ ಗ್ರಾಮದ ಯುವ ಮುಖಂಡ ಪ್ರಶಾಂತ್‌ರವರನ್ನು ಒಳಗೊಂಡ ಸದಸ್ಯರು ಮನವಿ ಪತ್ರವನ್ನು ಸಲ್ಲಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಹನೂರು ಭಾಗವೂ ಬರಪೀಡಿತ ಪ್ರದೇಶವೆಂದು ಗಮನದಲ್ಲಿದೆ ಹನೂರು ಭಾಗಕ್ಕೆ ಈ ಯೋಜನೆ ಮಾಡಿಕೊಡುವಂತೆ ಜಲ ಉಸ್ತುವಾರಿ ಸಚಿವ ವೆಂಕಟೇಶ್‌ರವರು ಸಹ ಒತ್ತಡ ಹಾಕುತ್ತಿದ್ದಾರೆ. ಒಂದೇ ಬಾರಿ ಎಷ್ಟು ದೊಡ್ಡ ಮೊತ್ತದ ಅನುದಾನವನ್ನು ನೀಡಲು ಸಾಧ್ಯವಿಲ್ಲ. ಬಜೆಟ್‌ನಲ್ಲಿ ಈ ಯೋಜನೆಯನ್ನು ಸೇರ್ಪಡೆ ಮಾಡಿ ಹಂತ ಹಂತವಾಗಿ ಅನುದಾನ ನೀಡಿ ಈ ಯೋಜನೆ ಯಶಸ್ವಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಸೇರ್ಪಡೆ ಮಾಡಿ ಅನುದಾನ ನೀಡುವುದಾಗಿ ತಿಳಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಹಮ್ಮಿಕೊಂಡಿದ್ದ ಪಾದಯಾತ್ರೆ ಹಾಗೂ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

2 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

2 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

3 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

3 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

3 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

3 hours ago