ಹನೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕವಾಗಿ ಹರಡುತ್ತಿರುವ ಹಕ್ಕಿಜ್ವರದ ನಿಯಂತ್ರಣಕ್ಕೆ ಸರ್ವ ರೀತಿಯಲ್ಲೂ ಕ್ರಮ ಕೈಗೊಂಡಿದ್ದೇವೆ ಎಂದು ಪಶು ಸಂಗೋಪನೆ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹೇಳಿದ್ದಾರೆ.
ಈ ಕುರಿತು ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಹಕ್ಕಿಜ್ವರ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದು ಸೋಂಕಿತ ಪಕ್ಷಿಗಳನ್ನು ಸೂಕ್ತ ವಿಲೇವಾರಿ ಮಾಡಲಾಗುತ್ತಿದೆ. ಹಕ್ಕಿ ಜ್ವರ ಬೇರೆ ಪ್ರದೇಶಗಳಿಗೆ ಹರಡದಂತೆ ಎಲ್ಲಾ ರೀತಿಯ ಕ್ರಮವನ್ನು ಇಲಾಖೆ ಕೈಗೊಂಡಿದೆ. ಸೋಂಕಿತ ಪಕ್ಷಿಗಳನ್ನು ಸೂಕ್ತ ವಿಲೇವಾರಿ ಮಾಡಿದ್ದು ಮುಂಜಾಗ್ರತೆ ವಹಿಸಿದ್ದೇವೆ ಎಂದರು.
ರಾಜ್ಯದಲ್ಲಿ ಹಕ್ಕಿ ಜ್ವರ ನಿಯಂತ್ರಿಸಲು ಸರ್ವ ರೀತಿಯಲ್ಲೂ ಕ್ರಮ ಕೈಗೊಂಡಿದ್ದೇವೆ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.





