ಚಾಮರಾಜನಗರ

ಹನೂರು: ಆರ್‌ಟಿಐ ಕಾರ್ಯಕರ್ತನ ವಿರುದ್ಧ ಕಿರುಕುಳ ಆರೋಪ

ಹನೂರು: ಮಕ್ಕಳ ವಿದ್ಯಾಭ್ಯಾಸ ಹಾಗೂ ಹೊಟ್ಟೆಪಾಡಿಗಾಗಿ ಒಂದು ಶೆಡ್ ಹಾಕಿಕೊಂಡು ಹೋಟೆಲ್ ನಡೆಸುತ್ತಿರುವ ನಮಗೆ ಆರ್‌ಟಿಐ ಕಾರ್ಯಕರ್ತ ಅಪ್ಪಾಜಿ ಕಿರುಕುಳ ನೀಡುತ್ತಿದ್ದಾರೆ ಎಂದು ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿ ತಾಂಡ ಶೆಟ್ಟಿ ಆರೋಪಿಸಿದ್ದಾರೆ.
ಪಿ.ಜಿ ಪಾಳ್ಯ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿಯಾದ ನಾನು ಈ ಹಿಂದೆ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದೆ ಆದರೆ ವಿದ್ಯುತ್ ಶಾಕ್‌ನಿಂದ ಗಾಯಗೊಂಡ ನಂತರ ಅತಿ ಭಾರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ, ನಾಲ್ಕು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗು ಇರುವುದರಿಂದ ಜೀವನ ನಿರ್ವಹಣೆಗಾಗಿ ರಸ್ತೆ ಬದಿಯಲ್ಲಿ ಶೆಡ್ ಹಾಕಿಕೊಂಡು ಕಾಫಿ ತಿಂಡಿ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ ಮಾಡಿ ಜೀವನ ಸಾಕುತ್ತಿದ್ದೇವೆ ಆದರೆ ಆರ್‌ಟಿಐ ಕಾರ್ಯಕರ್ತ ಅಪ್ಪಾಜಿ ನೀನು ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಬೇಕಾದರೆ ಇಂತಿಷ್ಟು ಹಣ ಕೊಡಬೇಕು ಇಲ್ಲದಿದ್ದರೆ ನಿನ್ನ ವಿರುದ್ಧ ಅರಣ್ಯ ಇಲಾಖೆ ಪೊಲೀಸ್‌ನವರಿಗೆ ದೂರು ನೀಡಿ ತೆರವು ಮಾಡಿಸುತ್ತೇನೆ ಎಂದು ಕಿರುಕುಳ ನೀಡುತ್ತಿದ್ದಾರೆ. ಇದಲ್ಲದೆ ಬೇರೆಯವರ ಬಳಿ ಇಂತಿಷ್ಟು ಹಣ ಕೊಟ್ಟುಬಿಡಿ ಸುಮ್ಮನೆ ಎದುರಾಕಿಕೊಳ್ಳಬೇಡಿ ಎಂದು ಹೇಳಿ ಕಳುಹಿಸುತ್ತಿದ್ದಾರೆ ಇದರಿಂದ ನಮಗೆ ಜೀವನವೇ ಸಾಕಾಗಿ ಹೋಗಿದೆ ಮುಂದೆ ಇದೇ ರೀತಿ ತೊಂದರೆ ನೀಡಿದರೆ ಕುಟುಂಬ ಸಮೇತ ವಿಷ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಸ್ಥಿತಿಯನ್ನು ಕಂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಅವರು ಒಡೆಯರ್ ಪಾಳ್ಯ ಗ್ರಾಮದಲ್ಲಿ ಸಾಲ ಕೊಡಿಸಿ ಸಾಮಗ್ರಿಗಳನ್ನು ಕೊಡಿಸಿದ್ದಾರೆ. ಇನ್ನು ಪಬ್ಲಿಕ್ ಟಿವಿ ವ್ಯವಸ್ಥಾಪಕರಾದ ರಂಗನಾಥ್ ಅವರು ಸಹ ನಮಗೆ ಸಹಾಯ ಮಾಡಿದ್ದಾರೆ. ಆದರೆ ಆರ್ ಟಿ ಈ ಕಾರ್ಯಕರ್ತ ಅಪ್ಪಾಜಿ ಕಿರುಕುಳಕ್ಕೆ ಬೇಸತ್ತು ಹೋಗಿದ್ದೇವೆ, ಜೀವನದಲ್ಲಿ ಜಿಗುಪ್ಸೆ ಪ್ರಾರಂಭವಾಗಿದೆ. ನಾವು ಕಷ್ಟಪಟ್ಟು ಜೀವನ ನಡೆಸಲು ಈ ರೀತಿ ತೊಂದರೆ ಕೊಡುತ್ತಿದ್ದರೆ, ನಾವು ಬದುಕುವುದು ಹೇಗೆ? ಸಂಬಂಧಪಟ್ಟ ಜಿಲ್ಲಾಡಳಿತ ನಮಗೆ ಸೂಕ್ತ ರಕ್ಷಣೆ ಕೊಡಬೇಕು ಇಲ್ಲದಿದ್ದರೆ ಮುಂದೆ ಹಾಗೂ ಅನಾಹುತಗಳಿಗೆ ಅಪ್ಪಾಜಿಯೇ ನೇರ ಕಾರಣರಾಗುತ್ತಾರೆ ಎಂದು ಮಾಧ್ಯಮದವರ ಜೊತೆ ಅಳಲು ತೋಡಿಕೊಂಡಿದ್ದಾರೆ.

ತಾಂಡಾ ಶೆಟ್ಟಿ ಎಂಬುವರು ಹೋಟೆಲ್ ನಡೆಸುತ್ತಿರುವುದರಿಂದ ಯಾವುದೇ ತೊಂದರೆ ಇಲ್ಲ ಲೋಕೋಪಯೋಗಿ ರಸ್ತೆ ಒತ್ತುವರಿ ಮಾಡಿಕೊಂಡಿಲ್ಲ, ಅವರು ಜಮೀನಿನ ಬಳಿ ಹಾಕಿಕೊಂಡಿದ್ದಾರೆ, ಅವರಿಂದ ಯಾವುದೇ ತೊಂದರೆ ಇಲ್ಲ ತೊಂದರೆ ಇದ್ದಿದ್ದರೆ ನಾವೇ ಗ್ರಾಮ ಪಂಚಾಯಿತಿಗೆ ದೂರು ನೀಡುತ್ತಿದ್ದೆವು. ಆರ್ ಟಿ ಐ ಕಾರ್ಯಕರ್ತ ಅಪ್ಪಾಜಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಇವರ ವಿರುದ್ಧ ಪೊಲೀಸ ಇಲಾಖೆಯವರು ಕಡಿವಾಣ ಹಾಕಬೇಕು.
– ಕೃಷ್ಣಮೂರ್ತಿ, ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರ ಸಂಘ ಪಿ ಜಿ ಪಾಳ್ಯ

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಇಸ್ರೇಲ್-ಲೆಬನಾನ್‌ ನಡುವೆ 10 ದಿನಗಳ ಕದನ ವಿರಾಮ ಘೋಷಿಸಿದ ಟ್ರಂಪ್‌

ಇಸ್ರೇಲ್‌ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…

8 hours ago

ರಾಜ್ಯಗಳ ನಡುವೆ ಯಾವುದೇ ತಾರತಮ್ಯ ಇಲ್ಲ : ಪ್ರಧಾನಿ ಮೋದಿ ಅಭಯ

ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…

9 hours ago

KSOU | ಯುಜಿಸಿ ನೆಟ್, ಕೆ-ಸೆಟ್‌ ಪರೀಕ್ಷೆಗೆ ಉಚಿತ ತರಬೇತಿ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗಳಿಗೆ…

9 hours ago

ನಿಂತಿದ್ದ ವಿಮಾನಕ್ಕೆ ತಗುಲಿದ ಸ್ಪೈಸ್‌ಜೆಟ್‌ ವಿಮಾನ ; ತಪ್ಪಿದ ಭಾರಿ ಅನಾಹುತ

ನವದೆಹಲಿ : ಇಲ್ಲಿನ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ನಡುವೆ ಸಣ್ಣ ಘರ್ಷಣೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.…

10 hours ago

ಮಂತ್ರಾಲಯ ಬಳಿ ಭೀಕರ ಅಪಘಾತ : ಐವರು ಮಹಿಳೆಯರು ಸೇರಿ 8 ಮಂದಿ ಸಾವು

ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ…

10 hours ago

ಈ ಬಾರಿ ಕರ್ನಾಟಕಕ್ಕೆ ಮುಂಗಾರು ಕೊರತೆ ; ಮುಂಜಾಗ್ರತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ…

11 hours ago