ಚಾಮರಾಜನಗರ

ಹನೂರು: ಆರ್‌ಟಿಐ ಕಾರ್ಯಕರ್ತನ ವಿರುದ್ಧ ಕಿರುಕುಳ ಆರೋಪ

ಹನೂರು: ಮಕ್ಕಳ ವಿದ್ಯಾಭ್ಯಾಸ ಹಾಗೂ ಹೊಟ್ಟೆಪಾಡಿಗಾಗಿ ಒಂದು ಶೆಡ್ ಹಾಕಿಕೊಂಡು ಹೋಟೆಲ್ ನಡೆಸುತ್ತಿರುವ ನಮಗೆ ಆರ್‌ಟಿಐ ಕಾರ್ಯಕರ್ತ ಅಪ್ಪಾಜಿ ಕಿರುಕುಳ ನೀಡುತ್ತಿದ್ದಾರೆ ಎಂದು ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿ ತಾಂಡ ಶೆಟ್ಟಿ ಆರೋಪಿಸಿದ್ದಾರೆ.
ಪಿ.ಜಿ ಪಾಳ್ಯ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿಯಾದ ನಾನು ಈ ಹಿಂದೆ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದೆ ಆದರೆ ವಿದ್ಯುತ್ ಶಾಕ್‌ನಿಂದ ಗಾಯಗೊಂಡ ನಂತರ ಅತಿ ಭಾರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ, ನಾಲ್ಕು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗು ಇರುವುದರಿಂದ ಜೀವನ ನಿರ್ವಹಣೆಗಾಗಿ ರಸ್ತೆ ಬದಿಯಲ್ಲಿ ಶೆಡ್ ಹಾಕಿಕೊಂಡು ಕಾಫಿ ತಿಂಡಿ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ ಮಾಡಿ ಜೀವನ ಸಾಕುತ್ತಿದ್ದೇವೆ ಆದರೆ ಆರ್‌ಟಿಐ ಕಾರ್ಯಕರ್ತ ಅಪ್ಪಾಜಿ ನೀನು ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಬೇಕಾದರೆ ಇಂತಿಷ್ಟು ಹಣ ಕೊಡಬೇಕು ಇಲ್ಲದಿದ್ದರೆ ನಿನ್ನ ವಿರುದ್ಧ ಅರಣ್ಯ ಇಲಾಖೆ ಪೊಲೀಸ್‌ನವರಿಗೆ ದೂರು ನೀಡಿ ತೆರವು ಮಾಡಿಸುತ್ತೇನೆ ಎಂದು ಕಿರುಕುಳ ನೀಡುತ್ತಿದ್ದಾರೆ. ಇದಲ್ಲದೆ ಬೇರೆಯವರ ಬಳಿ ಇಂತಿಷ್ಟು ಹಣ ಕೊಟ್ಟುಬಿಡಿ ಸುಮ್ಮನೆ ಎದುರಾಕಿಕೊಳ್ಳಬೇಡಿ ಎಂದು ಹೇಳಿ ಕಳುಹಿಸುತ್ತಿದ್ದಾರೆ ಇದರಿಂದ ನಮಗೆ ಜೀವನವೇ ಸಾಕಾಗಿ ಹೋಗಿದೆ ಮುಂದೆ ಇದೇ ರೀತಿ ತೊಂದರೆ ನೀಡಿದರೆ ಕುಟುಂಬ ಸಮೇತ ವಿಷ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಸ್ಥಿತಿಯನ್ನು ಕಂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಅವರು ಒಡೆಯರ್ ಪಾಳ್ಯ ಗ್ರಾಮದಲ್ಲಿ ಸಾಲ ಕೊಡಿಸಿ ಸಾಮಗ್ರಿಗಳನ್ನು ಕೊಡಿಸಿದ್ದಾರೆ. ಇನ್ನು ಪಬ್ಲಿಕ್ ಟಿವಿ ವ್ಯವಸ್ಥಾಪಕರಾದ ರಂಗನಾಥ್ ಅವರು ಸಹ ನಮಗೆ ಸಹಾಯ ಮಾಡಿದ್ದಾರೆ. ಆದರೆ ಆರ್ ಟಿ ಈ ಕಾರ್ಯಕರ್ತ ಅಪ್ಪಾಜಿ ಕಿರುಕುಳಕ್ಕೆ ಬೇಸತ್ತು ಹೋಗಿದ್ದೇವೆ, ಜೀವನದಲ್ಲಿ ಜಿಗುಪ್ಸೆ ಪ್ರಾರಂಭವಾಗಿದೆ. ನಾವು ಕಷ್ಟಪಟ್ಟು ಜೀವನ ನಡೆಸಲು ಈ ರೀತಿ ತೊಂದರೆ ಕೊಡುತ್ತಿದ್ದರೆ, ನಾವು ಬದುಕುವುದು ಹೇಗೆ? ಸಂಬಂಧಪಟ್ಟ ಜಿಲ್ಲಾಡಳಿತ ನಮಗೆ ಸೂಕ್ತ ರಕ್ಷಣೆ ಕೊಡಬೇಕು ಇಲ್ಲದಿದ್ದರೆ ಮುಂದೆ ಹಾಗೂ ಅನಾಹುತಗಳಿಗೆ ಅಪ್ಪಾಜಿಯೇ ನೇರ ಕಾರಣರಾಗುತ್ತಾರೆ ಎಂದು ಮಾಧ್ಯಮದವರ ಜೊತೆ ಅಳಲು ತೋಡಿಕೊಂಡಿದ್ದಾರೆ.

ತಾಂಡಾ ಶೆಟ್ಟಿ ಎಂಬುವರು ಹೋಟೆಲ್ ನಡೆಸುತ್ತಿರುವುದರಿಂದ ಯಾವುದೇ ತೊಂದರೆ ಇಲ್ಲ ಲೋಕೋಪಯೋಗಿ ರಸ್ತೆ ಒತ್ತುವರಿ ಮಾಡಿಕೊಂಡಿಲ್ಲ, ಅವರು ಜಮೀನಿನ ಬಳಿ ಹಾಕಿಕೊಂಡಿದ್ದಾರೆ, ಅವರಿಂದ ಯಾವುದೇ ತೊಂದರೆ ಇಲ್ಲ ತೊಂದರೆ ಇದ್ದಿದ್ದರೆ ನಾವೇ ಗ್ರಾಮ ಪಂಚಾಯಿತಿಗೆ ದೂರು ನೀಡುತ್ತಿದ್ದೆವು. ಆರ್ ಟಿ ಐ ಕಾರ್ಯಕರ್ತ ಅಪ್ಪಾಜಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಇವರ ವಿರುದ್ಧ ಪೊಲೀಸ ಇಲಾಖೆಯವರು ಕಡಿವಾಣ ಹಾಕಬೇಕು.
– ಕೃಷ್ಣಮೂರ್ತಿ, ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರ ಸಂಘ ಪಿ ಜಿ ಪಾಳ್ಯ

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 hour ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

2 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

2 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

6 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

7 hours ago

ಕೆಆರ್‌ಎಸ್‌ ಡ್ಯಾಂ ನೀರಿನ ಮಟ್ಟ 81 ಅಡಿಗೆ ಕುಸಿತ: ರೈತರಲ್ಲಿ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…

7 hours ago