ಚಾಮರಾಜನಗರ

ಹನೂರು: ಆರ್‌ಟಿಐ ಕಾರ್ಯಕರ್ತನ ವಿರುದ್ಧ ಕಿರುಕುಳ ಆರೋಪ

ಹನೂರು: ಮಕ್ಕಳ ವಿದ್ಯಾಭ್ಯಾಸ ಹಾಗೂ ಹೊಟ್ಟೆಪಾಡಿಗಾಗಿ ಒಂದು ಶೆಡ್ ಹಾಕಿಕೊಂಡು ಹೋಟೆಲ್ ನಡೆಸುತ್ತಿರುವ ನಮಗೆ ಆರ್‌ಟಿಐ ಕಾರ್ಯಕರ್ತ ಅಪ್ಪಾಜಿ ಕಿರುಕುಳ ನೀಡುತ್ತಿದ್ದಾರೆ ಎಂದು ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿ ತಾಂಡ ಶೆಟ್ಟಿ ಆರೋಪಿಸಿದ್ದಾರೆ.
ಪಿ.ಜಿ ಪಾಳ್ಯ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ನಿವಾಸಿಯಾದ ನಾನು ಈ ಹಿಂದೆ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದೆ ಆದರೆ ವಿದ್ಯುತ್ ಶಾಕ್‌ನಿಂದ ಗಾಯಗೊಂಡ ನಂತರ ಅತಿ ಭಾರದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ, ನಾಲ್ಕು ಹೆಣ್ಣು ಮಕ್ಕಳು ಹಾಗೂ ಒಂದು ಗಂಡು ಮಗು ಇರುವುದರಿಂದ ಜೀವನ ನಿರ್ವಹಣೆಗಾಗಿ ರಸ್ತೆ ಬದಿಯಲ್ಲಿ ಶೆಡ್ ಹಾಕಿಕೊಂಡು ಕಾಫಿ ತಿಂಡಿ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ ಮಾಡಿ ಜೀವನ ಸಾಕುತ್ತಿದ್ದೇವೆ ಆದರೆ ಆರ್‌ಟಿಐ ಕಾರ್ಯಕರ್ತ ಅಪ್ಪಾಜಿ ನೀನು ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಬೇಕಾದರೆ ಇಂತಿಷ್ಟು ಹಣ ಕೊಡಬೇಕು ಇಲ್ಲದಿದ್ದರೆ ನಿನ್ನ ವಿರುದ್ಧ ಅರಣ್ಯ ಇಲಾಖೆ ಪೊಲೀಸ್‌ನವರಿಗೆ ದೂರು ನೀಡಿ ತೆರವು ಮಾಡಿಸುತ್ತೇನೆ ಎಂದು ಕಿರುಕುಳ ನೀಡುತ್ತಿದ್ದಾರೆ. ಇದಲ್ಲದೆ ಬೇರೆಯವರ ಬಳಿ ಇಂತಿಷ್ಟು ಹಣ ಕೊಟ್ಟುಬಿಡಿ ಸುಮ್ಮನೆ ಎದುರಾಕಿಕೊಳ್ಳಬೇಡಿ ಎಂದು ಹೇಳಿ ಕಳುಹಿಸುತ್ತಿದ್ದಾರೆ ಇದರಿಂದ ನಮಗೆ ಜೀವನವೇ ಸಾಕಾಗಿ ಹೋಗಿದೆ ಮುಂದೆ ಇದೇ ರೀತಿ ತೊಂದರೆ ನೀಡಿದರೆ ಕುಟುಂಬ ಸಮೇತ ವಿಷ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಮ್ಮ ಸ್ಥಿತಿಯನ್ನು ಕಂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಕುಮಾರ್ ಅವರು ಒಡೆಯರ್ ಪಾಳ್ಯ ಗ್ರಾಮದಲ್ಲಿ ಸಾಲ ಕೊಡಿಸಿ ಸಾಮಗ್ರಿಗಳನ್ನು ಕೊಡಿಸಿದ್ದಾರೆ. ಇನ್ನು ಪಬ್ಲಿಕ್ ಟಿವಿ ವ್ಯವಸ್ಥಾಪಕರಾದ ರಂಗನಾಥ್ ಅವರು ಸಹ ನಮಗೆ ಸಹಾಯ ಮಾಡಿದ್ದಾರೆ. ಆದರೆ ಆರ್ ಟಿ ಈ ಕಾರ್ಯಕರ್ತ ಅಪ್ಪಾಜಿ ಕಿರುಕುಳಕ್ಕೆ ಬೇಸತ್ತು ಹೋಗಿದ್ದೇವೆ, ಜೀವನದಲ್ಲಿ ಜಿಗುಪ್ಸೆ ಪ್ರಾರಂಭವಾಗಿದೆ. ನಾವು ಕಷ್ಟಪಟ್ಟು ಜೀವನ ನಡೆಸಲು ಈ ರೀತಿ ತೊಂದರೆ ಕೊಡುತ್ತಿದ್ದರೆ, ನಾವು ಬದುಕುವುದು ಹೇಗೆ? ಸಂಬಂಧಪಟ್ಟ ಜಿಲ್ಲಾಡಳಿತ ನಮಗೆ ಸೂಕ್ತ ರಕ್ಷಣೆ ಕೊಡಬೇಕು ಇಲ್ಲದಿದ್ದರೆ ಮುಂದೆ ಹಾಗೂ ಅನಾಹುತಗಳಿಗೆ ಅಪ್ಪಾಜಿಯೇ ನೇರ ಕಾರಣರಾಗುತ್ತಾರೆ ಎಂದು ಮಾಧ್ಯಮದವರ ಜೊತೆ ಅಳಲು ತೋಡಿಕೊಂಡಿದ್ದಾರೆ.

ತಾಂಡಾ ಶೆಟ್ಟಿ ಎಂಬುವರು ಹೋಟೆಲ್ ನಡೆಸುತ್ತಿರುವುದರಿಂದ ಯಾವುದೇ ತೊಂದರೆ ಇಲ್ಲ ಲೋಕೋಪಯೋಗಿ ರಸ್ತೆ ಒತ್ತುವರಿ ಮಾಡಿಕೊಂಡಿಲ್ಲ, ಅವರು ಜಮೀನಿನ ಬಳಿ ಹಾಕಿಕೊಂಡಿದ್ದಾರೆ, ಅವರಿಂದ ಯಾವುದೇ ತೊಂದರೆ ಇಲ್ಲ ತೊಂದರೆ ಇದ್ದಿದ್ದರೆ ನಾವೇ ಗ್ರಾಮ ಪಂಚಾಯಿತಿಗೆ ದೂರು ನೀಡುತ್ತಿದ್ದೆವು. ಆರ್ ಟಿ ಐ ಕಾರ್ಯಕರ್ತ ಅಪ್ಪಾಜಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಇವರ ವಿರುದ್ಧ ಪೊಲೀಸ ಇಲಾಖೆಯವರು ಕಡಿವಾಣ ಹಾಕಬೇಕು.
– ಕೃಷ್ಣಮೂರ್ತಿ, ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರ ಸಂಘ ಪಿ ಜಿ ಪಾಳ್ಯ

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

6 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

17 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago