ಚಾಮರಾಜನಗರ: ಸೇವಾ ನಡತೆ ಉಲ್ಲಂಘಟನೆ ಆರೋಪದ ಹಿನ್ನೆಲೆಯಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಾಲನೆ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಎಂದು ಶಾಲಾ ಶಿಕ್ಷಣ ಇಲಾಖೆಯ ಡಿಡಿ ರಾಮಚಂದ್ರ ರಾಜೇ ಅರಸು ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಯಳಂದೂರು ತಾಲ್ಲೂಕಿನ ಗುಂಬಳ್ಳಿ ಪ್ರೌಢಶಾಲಾ ಶಿಕ್ಷಕ ವೀರಭದ್ರಸ್ವಾಮಿ ಎಂಬುವವರ ಮೇಲೆ ಈ ವಿಚಾರಕ್ಕೆ ಸಂಬಂಧಿಸಿದಂತೆ ವೀರಭದ್ರಸ್ವಾಮಿ ಅವರನ್ನು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ.
ಪ್ರವಾಸದ ವೇಳೆ ಶಿಕ್ಷಕ ವೀರಭದ್ರಸ್ವಾಮಿ ಅವರು ಬಸ್ ಚಾಲನೆ ಮಾಡಿದ ವಿಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕದಂಬ ಸೇನಾ ಮುಖಂಡ ಅಂಬರೀಶ್ ಎಂಬುವವರು ಬಿಇಒಗೆ ದೂರು ನೀಡಿದ್ದರು. ಬಳಿಕ ಬಸ್ ಚಾಲನೆ ಮಾಡಿದ ಶಿಕ್ಷಕನ ವಿರುದ್ಧ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಯ ವೇಳೆ ಮೇಲ್ನೋಟಕ್ಕೆ ಶಿಕ್ಷಕ ಬಸ್ ಚಾಲನೆ ಮಾಡಿರುವುದು ನಿಯಮ ಬಾಹಿರವಾಗಿದೆ.
ಈ ಹಿನ್ನೆಲೆಯಲ್ಲಿ ಸೇವಾ ನಡತೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಶಿಕ್ಷಕ ವೀರಭದ್ರಸ್ವಾಮಿ ಅವರನ್ನು ಅಮಾನತುಗೊಳಿಸಿ ಎಂದು ಶಾಲಾ ಶಿಕ್ಷಣ ಇಲಾಖೆ ಡಿಡಿ ರಾಮಚಂದ್ರರಾಜೇ ಅರಸು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಶಾಸಕರ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ಇಲ್ಲ. ಆದರೆ ಶಾಸಕರು ಯಾವಾಗ ಬೇಕಾದರೂ ಪ್ರವಾಸಕ್ಕೆ ಹೋಗಬಹುದು ಎಂದು ಆರೋಗ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳಿಗೆ ಗುರಿಯಾಗುತ್ತಿದೆ. ಇದೀಗ…
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…