ಚಾಮರಾಜನಗರ

ಸೇವಾ ನಡತೆ ಉಲ್ಲಂಘನೆ ಆರೋಪ: ಬಸ್‌ ಚಾಲನೆ ಮಾಡಿದ ಶಿಕ್ಷಕ ಅಮಾನತಿಗೆ ಆದೇಶ

ಚಾಮರಾಜನಗರ: ಸೇವಾ ನಡತೆ ಉಲ್ಲಂಘಟನೆ ಆರೋಪದ ಹಿನ್ನೆಲೆಯಲ್ಲಿ ಶಾಲಾ ಶೈಕ್ಷಣಿಕ ಪ್ರವಾಸದ ವೇಳೆ ಬಸ್‌ ಚಾಲನೆ ಮಾಡಿದ ಶಿಕ್ಷಕರೊಬ್ಬರನ್ನು ಅಮಾನತು ಮಾಡಿ ಎಂದು ಶಾಲಾ ಶಿಕ್ಷಣ ಇಲಾಖೆಯ ಡಿಡಿ ರಾಮಚಂದ್ರ ರಾಜೇ ಅರಸು ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಯಳಂದೂರು ತಾಲ್ಲೂಕಿನ ಗುಂಬಳ್ಳಿ ಪ್ರೌಢಶಾಲಾ ಶಿಕ್ಷಕ ವೀರಭದ್ರಸ್ವಾಮಿ ಎಂಬುವವರ ಮೇಲೆ ಈ ವಿಚಾರಕ್ಕೆ ಸಂಬಂಧಿಸಿದಂತೆ ವೀರಭದ್ರಸ್ವಾಮಿ ಅವರನ್ನು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ.

ಪ್ರವಾಸದ ವೇಳೆ ಶಿಕ್ಷಕ ವೀರಭದ್ರಸ್ವಾಮಿ ಅವರು ಬಸ್‌ ಚಾಲನೆ ಮಾಡಿದ ವಿಡಿಯೋ ವೈರಲ್‌ ಆಗಿತ್ತು. ಈ ಹಿನ್ನೆಲೆಯಲ್ಲಿ ಕದಂಬ ಸೇನಾ ಮುಖಂಡ ಅಂಬರೀಶ್‌ ಎಂಬುವವರು ಬಿಇಒಗೆ ದೂರು ನೀಡಿದ್ದರು. ಬಳಿಕ ಬಸ್‌ ಚಾಲನೆ ಮಾಡಿದ ಶಿಕ್ಷಕನ ವಿರುದ್ಧ ನೋಟಿಸ್‌ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಯ ವೇಳೆ ಮೇಲ್ನೋಟಕ್ಕೆ ಶಿಕ್ಷಕ ಬಸ್ ಚಾಲನೆ ಮಾಡಿರುವುದು ನಿಯಮ ಬಾಹಿರವಾಗಿದೆ.

ಈ ಹಿನ್ನೆಲೆಯಲ್ಲಿ ಸೇವಾ ನಡತೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಶಿಕ್ಷಕ ವೀರಭದ್ರಸ್ವಾಮಿ ಅವರನ್ನು ಅಮಾನತುಗೊಳಿಸಿ ಎಂದು ಶಾಲಾ ಶಿಕ್ಷಣ ಇಲಾಖೆ ಡಿಡಿ ರಾಮಚಂದ್ರರಾಜೇ ಅರಸು ಆದೇಶ ಹೊರಡಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

9 mins ago

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಸಚಿವರಿಗೆ ವಿವಿಧ ಜಿಲ್ಲೆಗಳ ಮೇಲುಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಸೂಚನೆ…

47 mins ago

ವೆನಿಜುವೆಲಾ ದೇಶದಲ್ಲಿ ಕಂಡು ಕೇಳರಿಯದ ಭೀಕರ ಭೂಕಂಪ

ವೆನಿಜುವೆಲಾ: ವೆನಿಜುವೆಲಾ ದೇಶದ ಇತಿಹಾಸದಲ್ಲೇ ಕಂಡು ಕೇಳರಿಯದ ಭೀಕರ ಭೂಕಂಪ ಸಂಭವಿಸಿ ಸಾವಿರಾರು ಜನ ಸಾವನ್ನಪ್ಪಿದ್ದು, ಭಾರೀ ಪ್ರಮಾಣದ ಜನರು…

2 hours ago

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

5 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

7 hours ago