ಚಾಮರಾಜನಗರ

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು ದೋಚಿರುವ ಘಟನೆ ನಡೆದಿದೆ.

ದೇಗುಲದ ಬಾಗಿಲನ್ನು ಒಡೆದಿರುವ ಕಳ್ಳರು, ಅಲ್ಲಿದ್ದ ಎರಡು ಹುಂಡಿಗಳನ್ನು ದೇಗುಲದ ಹೊರ ಭಾಗಕ್ಕೆ ತಂದು, ಅದನ್ನು ಕಬ್ಬಿಣದ ರಾಡ್‌ಗಳ ಮೂಲಕ ಒಡೆದು, ಅದರಲ್ಲಿದ್ದ ಲಕ್ಷಾಂತರ ರೂ.ಗಳನ್ನು ದೋಚಿ ಅಲ್ಲೇ ಬೀಸಾಡಿದ್ದಾರೆ.

ಅಲ್ಲದೆ ದೇವಸ್ಥಾನದ ಉತ್ಸವಮೂರ್ತಿಯಲ್ಲಿದ್ದ ಚಿನ್ನದ ತಾಳಿ ಬೊಟ್ಟುಗಳನ್ನು ಸಹ ದೋಚಿದ್ದಾರೆ. ಇದರೊಂದಿಗೆ ಚಾಲಾಕಿ ಕಳ್ಳರು ಸಿಸಿ ಕ್ಯಾಮೆರಾ, ಡಿವಿಆರ್‌ನ್ನು ಕೂಡ ಕಳ್ಳತನ ಮಾಡಿದ್ದಾರೆ.

ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಐತಿಹಾಸಿಕ ದೇಗುಲ: ಈ ದೇಗುಲ ಐತಿಹಾಸಿಕ ದೇಗುಲವಾಗಿದ್ದು ನೂರಾರು ವರ್ಷಗಳ ಐತಿಹ್ಯವಿದೆ. ಪ್ರತಿ ವರ್ಷವೂ ಇಲ್ಲಿ ಒಂದು ತಿಂಗಳ ಕಾಲ ಗ್ರಾಮ ದೇವತೆಯ ಹಬ್ಬವನ್ನು ಆಚರಿಸಲಾಗುತ್ತದೆ. ಈ ಬಾರಿಯೂ ಹಬ್ಬ ನಡೆದ ನಂತರ ಹುಂಡಿುಂ ಹಣವನ್ನು ತೆಗೆದಿರಲಿಲ್ಲ. ಚಾಮುಂಡೇಶ್ವರಿ ಕೊಂಡೋತ್ಸವೂ ಕೂಡ ನಡೆುುಂತ್ತದೆ. ಕೊಂಡದ ರಾತ್ರಿ ಇಲ್ಲಿನ ದೇವಿಗೆ ಚಿನ್ನಾಭರಣಗಳನ್ನು ತೊಡಿಸಿ ದೇಗುಲದ ಬಾಗಿಲನ್ನೇ ಹಾಕುವುದಿಲ್ಲ. ಈ ಸಂದರ್ಭದಲ್ಲೂ ಕೂಡ ಇಲ್ಲಿ ಯಾವುದೇ ಕಳ್ಳತನ ನಡೆುದಿರುವುದಿಲ್ಲ. ಈಗ ನಡೆದಿರುವ ಕಳ್ಳತನ ಹಲವು ಅನುಮಾನಗಳಿಗೆ ಆಸ್ಪದ ನೀಡಿದೆ. ತನಿಖೆಯ ಬಳಿಕ ಇದಕ್ಕೆಲ್ಲಾ ಉತ್ತರ ದೊರೆಯಲಿದೆ.

ಆಂದೋಲನ ಡೆಸ್ಕ್

Recent Posts

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

3 mins ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

15 mins ago

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

2 hours ago

ಮಡಿಕೇರಿ: ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್:‌ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(‌24) ಆತ್ಮಹತ್ಯೆ ಮಾಡಿಕೊಂಡಿರುವ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ : ದೇಶವನ್ನು ಒಂದುಗೂಡಿಸಿದ ಖಾದಿ ಮಂತ್ರ

ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ : ನಿದ್ದೆ ಇಲ್ಲದ ಇಂಗ್ಲೆಂಡಿನ ಮೊದಲ ದಿನಗಳು

ಜಹಜಿನಲ್ಲಿ ನನಗೆ ಸಮುದ್ರ ಪ್ರಯಾಣದ ಯಾವ ತೊಂದರೆಯೂ ಆಗಲಿಲ್ಲ. ದಿನಗಳು ಕಳೆದಂತೆಲ್ಲ ನನ್ನ ಮನಸ್ಸು ಸಂದಿಗ್ಧ ಪರಿಸ್ಥಿತಿಗೆ ಬೀಳತೊಡಗಿದ್ದಿತು. ಹಡಗಿನ…

7 hours ago