ಚಾಮರಾಜನಗರ

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು ದೋಚಿರುವ ಘಟನೆ ನಡೆದಿದೆ.

ದೇಗುಲದ ಬಾಗಿಲನ್ನು ಒಡೆದಿರುವ ಕಳ್ಳರು, ಅಲ್ಲಿದ್ದ ಎರಡು ಹುಂಡಿಗಳನ್ನು ದೇಗುಲದ ಹೊರ ಭಾಗಕ್ಕೆ ತಂದು, ಅದನ್ನು ಕಬ್ಬಿಣದ ರಾಡ್‌ಗಳ ಮೂಲಕ ಒಡೆದು, ಅದರಲ್ಲಿದ್ದ ಲಕ್ಷಾಂತರ ರೂ.ಗಳನ್ನು ದೋಚಿ ಅಲ್ಲೇ ಬೀಸಾಡಿದ್ದಾರೆ.

ಅಲ್ಲದೆ ದೇವಸ್ಥಾನದ ಉತ್ಸವಮೂರ್ತಿಯಲ್ಲಿದ್ದ ಚಿನ್ನದ ತಾಳಿ ಬೊಟ್ಟುಗಳನ್ನು ಸಹ ದೋಚಿದ್ದಾರೆ. ಇದರೊಂದಿಗೆ ಚಾಲಾಕಿ ಕಳ್ಳರು ಸಿಸಿ ಕ್ಯಾಮೆರಾ, ಡಿವಿಆರ್‌ನ್ನು ಕೂಡ ಕಳ್ಳತನ ಮಾಡಿದ್ದಾರೆ.

ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಐತಿಹಾಸಿಕ ದೇಗುಲ: ಈ ದೇಗುಲ ಐತಿಹಾಸಿಕ ದೇಗುಲವಾಗಿದ್ದು ನೂರಾರು ವರ್ಷಗಳ ಐತಿಹ್ಯವಿದೆ. ಪ್ರತಿ ವರ್ಷವೂ ಇಲ್ಲಿ ಒಂದು ತಿಂಗಳ ಕಾಲ ಗ್ರಾಮ ದೇವತೆಯ ಹಬ್ಬವನ್ನು ಆಚರಿಸಲಾಗುತ್ತದೆ. ಈ ಬಾರಿಯೂ ಹಬ್ಬ ನಡೆದ ನಂತರ ಹುಂಡಿುಂ ಹಣವನ್ನು ತೆಗೆದಿರಲಿಲ್ಲ. ಚಾಮುಂಡೇಶ್ವರಿ ಕೊಂಡೋತ್ಸವೂ ಕೂಡ ನಡೆುುಂತ್ತದೆ. ಕೊಂಡದ ರಾತ್ರಿ ಇಲ್ಲಿನ ದೇವಿಗೆ ಚಿನ್ನಾಭರಣಗಳನ್ನು ತೊಡಿಸಿ ದೇಗುಲದ ಬಾಗಿಲನ್ನೇ ಹಾಕುವುದಿಲ್ಲ. ಈ ಸಂದರ್ಭದಲ್ಲೂ ಕೂಡ ಇಲ್ಲಿ ಯಾವುದೇ ಕಳ್ಳತನ ನಡೆುದಿರುವುದಿಲ್ಲ. ಈಗ ನಡೆದಿರುವ ಕಳ್ಳತನ ಹಲವು ಅನುಮಾನಗಳಿಗೆ ಆಸ್ಪದ ನೀಡಿದೆ. ತನಿಖೆಯ ಬಳಿಕ ಇದಕ್ಕೆಲ್ಲಾ ಉತ್ತರ ದೊರೆಯಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

22 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

22 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

22 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

22 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

23 hours ago