ಚಾಮರಾಜನಗರ

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ, ಸಿಸಿ ಕ್ಯಾಮೆರಾಗಳನ್ನು ದೋಚಿರುವ ಘಟನೆ ನಡೆದಿದೆ.

ದೇಗುಲದ ಬಾಗಿಲನ್ನು ಒಡೆದಿರುವ ಕಳ್ಳರು, ಅಲ್ಲಿದ್ದ ಎರಡು ಹುಂಡಿಗಳನ್ನು ದೇಗುಲದ ಹೊರ ಭಾಗಕ್ಕೆ ತಂದು, ಅದನ್ನು ಕಬ್ಬಿಣದ ರಾಡ್‌ಗಳ ಮೂಲಕ ಒಡೆದು, ಅದರಲ್ಲಿದ್ದ ಲಕ್ಷಾಂತರ ರೂ.ಗಳನ್ನು ದೋಚಿ ಅಲ್ಲೇ ಬೀಸಾಡಿದ್ದಾರೆ.

ಅಲ್ಲದೆ ದೇವಸ್ಥಾನದ ಉತ್ಸವಮೂರ್ತಿಯಲ್ಲಿದ್ದ ಚಿನ್ನದ ತಾಳಿ ಬೊಟ್ಟುಗಳನ್ನು ಸಹ ದೋಚಿದ್ದಾರೆ. ಇದರೊಂದಿಗೆ ಚಾಲಾಕಿ ಕಳ್ಳರು ಸಿಸಿ ಕ್ಯಾಮೆರಾ, ಡಿವಿಆರ್‌ನ್ನು ಕೂಡ ಕಳ್ಳತನ ಮಾಡಿದ್ದಾರೆ.

ಈ ಬಗ್ಗೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಐತಿಹಾಸಿಕ ದೇಗುಲ: ಈ ದೇಗುಲ ಐತಿಹಾಸಿಕ ದೇಗುಲವಾಗಿದ್ದು ನೂರಾರು ವರ್ಷಗಳ ಐತಿಹ್ಯವಿದೆ. ಪ್ರತಿ ವರ್ಷವೂ ಇಲ್ಲಿ ಒಂದು ತಿಂಗಳ ಕಾಲ ಗ್ರಾಮ ದೇವತೆಯ ಹಬ್ಬವನ್ನು ಆಚರಿಸಲಾಗುತ್ತದೆ. ಈ ಬಾರಿಯೂ ಹಬ್ಬ ನಡೆದ ನಂತರ ಹುಂಡಿುಂ ಹಣವನ್ನು ತೆಗೆದಿರಲಿಲ್ಲ. ಚಾಮುಂಡೇಶ್ವರಿ ಕೊಂಡೋತ್ಸವೂ ಕೂಡ ನಡೆುುಂತ್ತದೆ. ಕೊಂಡದ ರಾತ್ರಿ ಇಲ್ಲಿನ ದೇವಿಗೆ ಚಿನ್ನಾಭರಣಗಳನ್ನು ತೊಡಿಸಿ ದೇಗುಲದ ಬಾಗಿಲನ್ನೇ ಹಾಕುವುದಿಲ್ಲ. ಈ ಸಂದರ್ಭದಲ್ಲೂ ಕೂಡ ಇಲ್ಲಿ ಯಾವುದೇ ಕಳ್ಳತನ ನಡೆುದಿರುವುದಿಲ್ಲ. ಈಗ ನಡೆದಿರುವ ಕಳ್ಳತನ ಹಲವು ಅನುಮಾನಗಳಿಗೆ ಆಸ್ಪದ ನೀಡಿದೆ. ತನಿಖೆಯ ಬಳಿಕ ಇದಕ್ಕೆಲ್ಲಾ ಉತ್ತರ ದೊರೆಯಲಿದೆ.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

8 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

8 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

8 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

8 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

8 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

8 hours ago