ಹನೂರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣೆ

ಹನೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧಡೆ ಬಾಬಾ ಸಾಹೇಬರ ಸ್ಮರಣೆಯನ್ನು ಮಾಡಲಾಯಿತು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಮೂರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು.

ಈ ವೇಳೆ ಮಾತನಾಡಿದ ಮೂರ್ತಿ ಜಗತ್ತು ಕಂಡ ಶ್ರೇಷ್ಠ ಮಹಾ ಮಾನವತವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಅನೇಕ ಕ್ಷೇತ್ರಕ್ಕೆ ಗಣನೀಯ ಸೇವೆ ಮತ್ತು ಕೊಡುಗೆಯನ್ನು ನೀಡಿದ್ದಾರೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ನೀಡಿರುವ ಸಂವಿಧಾನದ ಕೊಡುಗೆ ಅನನ್ಯ ಮತ್ತು ಅವಿಸ್ಮರಣೆಯಾದದ್ದು. ಶೋಷಿತರು ದೀನದಲಿತರಲ್ಲದೇ ಸರ್ವ ಜನಾಂಗದ ಹಿತಕ್ಕಾಗಿ ಶ್ರಮಿಸಿದ ಮಹಾ ನಾಯಕ ಭೀಮ್ ರಾವ್ ಅಂಬೇಡ್ಕರ್ ಅವರ ತತ್ವ ಆದರ್ಶಗಳು ಅನುಕರಣೆಯ ಎಂದರು.

ಪಟ್ಟಣದ ತಹಸೀಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿ,ತಾಲೂಕು ಪಂಚಾಯಿತಿ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಬಾಬಾ ಸಾಹೇಬರ ಭಾವಚಿತ್ರವನ್ನು ಇಟ್ಟು ಗೌರವ ಪೂರ್ವಕವಾಗಿ ಪುಷ್ಪ ನಮನ, ಗೌರವ ನಮನ ಸಲ್ಲಿಸಿ ಪೂಜಿಸಲಾಯಿತು.

ಈ ಸಂದರ್ಭದಲ್ಲಿ ಪಪಂ ಸದಸ್ಯರುಗಳಾದ ಹರೀಶ್, ಸೋಮಶೇಖರ್, ದ್ವಿತೀಯ ದರ್ಜೆ ಸಹಾಯಕ ಮಾದೇಶ್, ಆರೋಗ್ಯ ನಿರೀಕ್ಷಕ ಬಾಲಸುಬ್ರಮಣ್ಯಂ, ಕಂದಾಯ ನಿರೀಕ್ಷಕ ಮಂಜುನಾಥ್, ಅಕೌಂಟೆಂಟ್ ದೇವಿಕಾ,ಕಚೇರಿ ನಿರ್ವಾಹಕ ಮದನ್, ಪ್ರತಾಪ್ ಜೂನಿಯರ್ ಪ್ರೋಗ್ರಾಮರ್ ನಾಗೇಂದ್ರ ಸಿಬ್ಬಂದಿಗಳಾದ ಶರತ್, ಶ್ರೀನಿವಾಸ್, ರಾಕೇಶ್, ಸುಷ್ಮಾ ಇನ್ನಿತರರಿದ್ದರು.

andolana

Recent Posts

ಓದುಗರ ಪತ್ರ: ಕುವೆಂಪು

ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…

2 hours ago

ಓದುಗರ ಪತ್ರ: ಮುಕ್ತ ವಿಶ್ವವಿದ್ಯಾಲಯದ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…

2 hours ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿ

ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…

2 hours ago

ಓದುಗರ ಪತ್ರ: ಹೊಸ ವರ್ಷ ಆಚರಣೆ: ಇರಲಿ ಸಂಯಮ, ಗುರಿ

ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…

2 hours ago

ಮಕ್ಕಳ ಪರೀಕ್ಷಾ ಸಿದ್ಧತೆಯಲ್ಲಿ ಪೋಷಕರ ಪಾತ್ರದ ಮಹತ್ವ

ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ  ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…

2 hours ago

ಸಾಧನೆಯ ಹಾದಿಯಲ್ಲಿ ಬೆಳೆದು ಬೆಳಗಿದವರು

೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…

3 hours ago