ಹನೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧಡೆ ಬಾಬಾ ಸಾಹೇಬರ ಸ್ಮರಣೆಯನ್ನು ಮಾಡಲಾಯಿತು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಮೂರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು.
ಈ ವೇಳೆ ಮಾತನಾಡಿದ ಮೂರ್ತಿ ಜಗತ್ತು ಕಂಡ ಶ್ರೇಷ್ಠ ಮಹಾ ಮಾನವತವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಅನೇಕ ಕ್ಷೇತ್ರಕ್ಕೆ ಗಣನೀಯ ಸೇವೆ ಮತ್ತು ಕೊಡುಗೆಯನ್ನು ನೀಡಿದ್ದಾರೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ನೀಡಿರುವ ಸಂವಿಧಾನದ ಕೊಡುಗೆ ಅನನ್ಯ ಮತ್ತು ಅವಿಸ್ಮರಣೆಯಾದದ್ದು. ಶೋಷಿತರು ದೀನದಲಿತರಲ್ಲದೇ ಸರ್ವ ಜನಾಂಗದ ಹಿತಕ್ಕಾಗಿ ಶ್ರಮಿಸಿದ ಮಹಾ ನಾಯಕ ಭೀಮ್ ರಾವ್ ಅಂಬೇಡ್ಕರ್ ಅವರ ತತ್ವ ಆದರ್ಶಗಳು ಅನುಕರಣೆಯ ಎಂದರು.
ಪಟ್ಟಣದ ತಹಸೀಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿ,ತಾಲೂಕು ಪಂಚಾಯಿತಿ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಬಾಬಾ ಸಾಹೇಬರ ಭಾವಚಿತ್ರವನ್ನು ಇಟ್ಟು ಗೌರವ ಪೂರ್ವಕವಾಗಿ ಪುಷ್ಪ ನಮನ, ಗೌರವ ನಮನ ಸಲ್ಲಿಸಿ ಪೂಜಿಸಲಾಯಿತು.
ಈ ಸಂದರ್ಭದಲ್ಲಿ ಪಪಂ ಸದಸ್ಯರುಗಳಾದ ಹರೀಶ್, ಸೋಮಶೇಖರ್, ದ್ವಿತೀಯ ದರ್ಜೆ ಸಹಾಯಕ ಮಾದೇಶ್, ಆರೋಗ್ಯ ನಿರೀಕ್ಷಕ ಬಾಲಸುಬ್ರಮಣ್ಯಂ, ಕಂದಾಯ ನಿರೀಕ್ಷಕ ಮಂಜುನಾಥ್, ಅಕೌಂಟೆಂಟ್ ದೇವಿಕಾ,ಕಚೇರಿ ನಿರ್ವಾಹಕ ಮದನ್, ಪ್ರತಾಪ್ ಜೂನಿಯರ್ ಪ್ರೋಗ್ರಾಮರ್ ನಾಗೇಂದ್ರ ಸಿಬ್ಬಂದಿಗಳಾದ ಶರತ್, ಶ್ರೀನಿವಾಸ್, ರಾಕೇಶ್, ಸುಷ್ಮಾ ಇನ್ನಿತರರಿದ್ದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…