ಹನೂರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಣೆ

ಹನೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧಡೆ ಬಾಬಾ ಸಾಹೇಬರ ಸ್ಮರಣೆಯನ್ನು ಮಾಡಲಾಯಿತು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಮೂರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು.

ಈ ವೇಳೆ ಮಾತನಾಡಿದ ಮೂರ್ತಿ ಜಗತ್ತು ಕಂಡ ಶ್ರೇಷ್ಠ ಮಹಾ ಮಾನವತವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಅನೇಕ ಕ್ಷೇತ್ರಕ್ಕೆ ಗಣನೀಯ ಸೇವೆ ಮತ್ತು ಕೊಡುಗೆಯನ್ನು ನೀಡಿದ್ದಾರೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ನೀಡಿರುವ ಸಂವಿಧಾನದ ಕೊಡುಗೆ ಅನನ್ಯ ಮತ್ತು ಅವಿಸ್ಮರಣೆಯಾದದ್ದು. ಶೋಷಿತರು ದೀನದಲಿತರಲ್ಲದೇ ಸರ್ವ ಜನಾಂಗದ ಹಿತಕ್ಕಾಗಿ ಶ್ರಮಿಸಿದ ಮಹಾ ನಾಯಕ ಭೀಮ್ ರಾವ್ ಅಂಬೇಡ್ಕರ್ ಅವರ ತತ್ವ ಆದರ್ಶಗಳು ಅನುಕರಣೆಯ ಎಂದರು.

ಪಟ್ಟಣದ ತಹಸೀಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿ,ತಾಲೂಕು ಪಂಚಾಯಿತಿ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಬಾಬಾ ಸಾಹೇಬರ ಭಾವಚಿತ್ರವನ್ನು ಇಟ್ಟು ಗೌರವ ಪೂರ್ವಕವಾಗಿ ಪುಷ್ಪ ನಮನ, ಗೌರವ ನಮನ ಸಲ್ಲಿಸಿ ಪೂಜಿಸಲಾಯಿತು.

ಈ ಸಂದರ್ಭದಲ್ಲಿ ಪಪಂ ಸದಸ್ಯರುಗಳಾದ ಹರೀಶ್, ಸೋಮಶೇಖರ್, ದ್ವಿತೀಯ ದರ್ಜೆ ಸಹಾಯಕ ಮಾದೇಶ್, ಆರೋಗ್ಯ ನಿರೀಕ್ಷಕ ಬಾಲಸುಬ್ರಮಣ್ಯಂ, ಕಂದಾಯ ನಿರೀಕ್ಷಕ ಮಂಜುನಾಥ್, ಅಕೌಂಟೆಂಟ್ ದೇವಿಕಾ,ಕಚೇರಿ ನಿರ್ವಾಹಕ ಮದನ್, ಪ್ರತಾಪ್ ಜೂನಿಯರ್ ಪ್ರೋಗ್ರಾಮರ್ ನಾಗೇಂದ್ರ ಸಿಬ್ಬಂದಿಗಳಾದ ಶರತ್, ಶ್ರೀನಿವಾಸ್, ರಾಕೇಶ್, ಸುಷ್ಮಾ ಇನ್ನಿತರರಿದ್ದರು.

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

6 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

33 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago