ಹನೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧಡೆ ಬಾಬಾ ಸಾಹೇಬರ ಸ್ಮರಣೆಯನ್ನು ಮಾಡಲಾಯಿತು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಮೂರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು.
ಈ ವೇಳೆ ಮಾತನಾಡಿದ ಮೂರ್ತಿ ಜಗತ್ತು ಕಂಡ ಶ್ರೇಷ್ಠ ಮಹಾ ಮಾನವತವಾದಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಅನೇಕ ಕ್ಷೇತ್ರಕ್ಕೆ ಗಣನೀಯ ಸೇವೆ ಮತ್ತು ಕೊಡುಗೆಯನ್ನು ನೀಡಿದ್ದಾರೆ. ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ನೀಡಿರುವ ಸಂವಿಧಾನದ ಕೊಡುಗೆ ಅನನ್ಯ ಮತ್ತು ಅವಿಸ್ಮರಣೆಯಾದದ್ದು. ಶೋಷಿತರು ದೀನದಲಿತರಲ್ಲದೇ ಸರ್ವ ಜನಾಂಗದ ಹಿತಕ್ಕಾಗಿ ಶ್ರಮಿಸಿದ ಮಹಾ ನಾಯಕ ಭೀಮ್ ರಾವ್ ಅಂಬೇಡ್ಕರ್ ಅವರ ತತ್ವ ಆದರ್ಶಗಳು ಅನುಕರಣೆಯ ಎಂದರು.
ಪಟ್ಟಣದ ತಹಸೀಲ್ದಾರ್ ಕಚೇರಿ, ಉಪ ನೋಂದಣಾಧಿಕಾರಿ,ತಾಲೂಕು ಪಂಚಾಯಿತಿ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಲ್ಲಿ ಬಾಬಾ ಸಾಹೇಬರ ಭಾವಚಿತ್ರವನ್ನು ಇಟ್ಟು ಗೌರವ ಪೂರ್ವಕವಾಗಿ ಪುಷ್ಪ ನಮನ, ಗೌರವ ನಮನ ಸಲ್ಲಿಸಿ ಪೂಜಿಸಲಾಯಿತು.
ಈ ಸಂದರ್ಭದಲ್ಲಿ ಪಪಂ ಸದಸ್ಯರುಗಳಾದ ಹರೀಶ್, ಸೋಮಶೇಖರ್, ದ್ವಿತೀಯ ದರ್ಜೆ ಸಹಾಯಕ ಮಾದೇಶ್, ಆರೋಗ್ಯ ನಿರೀಕ್ಷಕ ಬಾಲಸುಬ್ರಮಣ್ಯಂ, ಕಂದಾಯ ನಿರೀಕ್ಷಕ ಮಂಜುನಾಥ್, ಅಕೌಂಟೆಂಟ್ ದೇವಿಕಾ,ಕಚೇರಿ ನಿರ್ವಾಹಕ ಮದನ್, ಪ್ರತಾಪ್ ಜೂನಿಯರ್ ಪ್ರೋಗ್ರಾಮರ್ ನಾಗೇಂದ್ರ ಸಿಬ್ಬಂದಿಗಳಾದ ಶರತ್, ಶ್ರೀನಿವಾಸ್, ರಾಕೇಶ್, ಸುಷ್ಮಾ ಇನ್ನಿತರರಿದ್ದರು.
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…
ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…