ಚಾಮರಾಜನಗರ

ಆಂದೋಲನ ವರದಿ ಫಲಶೃತಿ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಭಕ್ತರಿಗೆ ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಯಿತು.

ಗುಂಡ್ಲುಪೇಟೆ ತಾಲ್ಲೂಕಿನ ಗೋಪಾಲಸ್ವಾಮಿ ಬೆಟ್ಟಕ್ಕೆ ನನಿತ್ಯ ಸಾವಿರಾರು ಭಕ್ತರು, ಪ್ರವಾಸಿಗರು ವಿವಿಧ ಜಿಲ್ಲೆ ರಾಜ್ಯಗಳಿಂದ ಹಾಗೂ ವಿದೇಶದಿಂದಲೂ ಆಗಮಿಸುತ್ತಾರೆ. ಆದರೆ ಮಳೆ ಬಿಸಿಲಿಗೆ ಪ್ರವಾಸಿಗರು ನಿಲ್ಲಲು ಸರತಿ ಸಾಲಿನ ಶೆಡ್ ಇಲ್ಲದ ಕಾರಣ ತುಂಬಾ ಅವಸ್ಥೆ ಪಡುತ್ತಿದ್ದರು. ಈ ವಿಚಾರವಾಗಿ ಆಂದೋಲನ ಪತ್ರಿಕೆ “ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಬಿಸಿಲಿಗೆ ನಳುಗಿದ ಪ್ರವಾಸಿಗರು” ಎಂಬ ಶೀರ್ಷಿಕೆಯಲ್ಲಿ ವರದಿ‌ ಮಾಡಲಾಗಿತ್ತು.

ಈ ವರದಿಯನ್ನು ಗಮನಿಸಿದ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳಾದ ಪರಮೇಶಿ ಹಾಗೂ ವೈಷ್ಣವಿ ಅವರು ಹಿಂದಿನ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರ ಜೊತೆ ಮಾತನಾಡಿ ಕಾಯಕಲ್ಪ ರೂಪಿಸುವಂತೆ ಸೂಚಿಸಿದರು. ನಂತರ ಶಾಸಕ ಎಚ್ ಎಂ ಗಣೇಶ್ ಪ್ರಸಾದ್ ಜೊತೆ ಚರ್ಚಿಸಿ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಇದಕ್ಲೆ ಸ್ಪಂದಿಸಿದ ಶಾಸಕ ಎಚ್ ಎಂ ಗಣೇಶ್ ಪ್ರಸಾದ್ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಪ್ರವಾಸಿಗರು, ಭಕ್ತರಿಗೆ ಅನುಕೂಲವಾಗಲಿ ಎಂದು ಸರತಿ ಸಾಲಿನ ಶೆಡ್ ನಿರ್ಮಾಣಕ್ಕೆ ಅನುದಾನ ಹಾಕಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗಣೇಶ್ ಪ್ರಸಾದ್ ಅವರು, ಅನೇಕ ದಿನಗಳಲ್ಲಿ ಮಾದ್ಯಮದಲ್ಲಿ ಪ್ರವಾಸಿಗರಿಗೆ ಬಿಸಿಲು ಮಳೆಗೆ ಸರತಿ ಸಾಲಿನಲ್ಲಿ ನಿಲ್ಲುವವರಿಗೆ ಸಮಸ್ಯೆಯಾಗುವ ಬಗ್ಗೆ ವರದಿ ಬಂದ ಹಿನ್ನಲೆ ಜಿಲ್ಲಾಧಿಕಾರಿಯಾಗಿದ್ದ ಶಿಲ್ಪಾನಾಗ್ ರವರು ನನಗೆ ಕರೆ ಮಾಡಿ ಅನುದಾನ‌ ನೀಡುವ ಬಗ್ಗೆ ಕೇಳಿದ್ದರು. ಅದರಂತೆ 20 ಲಕ್ಷ ಅನುದಾನದಲ್ಲಿ ಕಾಮಗಾರಿಗೆ ಗುದ್ದಲಿಪೂಜೆ ನಡೆಸಿದ್ದು ಬಿಸಿಲು ಮಳೆಯಿಂದ ಪ್ರಯಾಣಿಕರಿಗೆ ಅನುಕೂಲವಾಗುತ್ತದೆ. ಇಲ್ಲಿಯೇ ಟಿಕೆಟ್ ಕೌಂಟರ್ ತೆರೆಯುವುದರಿಂದ ಬಸ್ ಗಳು ಶೆಡ್ ಬಳಿಯಿಂದ ತೆರಳಲಿದೆ ಎಂದರು.

ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ನಂಜುಂಡ ಪ್ರಸಾದ್, ಮಾಜಿ‌ಕಾಡಾ ಅಧ್ಯಕ್ಷ ನಂಜಪ್ಪ, ಪಿ ಬಿ ರಾಜಶೇಖರ್, ಬಸವರಾಜು, ಹಾಪ್ ಕಾಮ್ಸ್ ಅಧ್ಯಕ್ಷ ನಾಗೇಶ್, ಎಪಿಎಂಸಿ‌ ಅಧ್ಯಕ್ಷ ನಾಗರಾಜು, ಲೋಕೇಶ್ ಗೋಪಾಲಪುರ, ರವಿ ಕಲ್ಲಿಪುರ, ಸಿಎಫ್ ಪ್ರಭಾಕರನ್, ಎಸಿಎಫ್ ನವೀನ್ ಕುಮಾರ್, ಆರ್ ಎಫ್ ಓ ಮಲ್ಲೇಶ್, ಡಿಅರ್ ಎಫ್ ಓ ಶ್ರೀಕಾಂತ್, ಕೆಆರ್ ಡಿಎಲ್ ಇಇ ತಿಪ್ಪಾರೆಡ್ಡಿ, ಎಇಇ ಪ್ರಸನ್ನ ಕುಮಾರ್, ಪ್ರಶಾಂತ್, ಶಂಕರ್ ಗಾರಿ ಮತ್ತಿತರರಿದ್ದರು.

 

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago