ಚಾಮರಾಜನಗರ

ಬಂಡೀಪುರದಲ್ಲಿ ಮತ್ತೊಂದು ಸಾಕಾನೆ ಕ್ಯಾಂಪ್

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರದ ಸಭಾಂಗಣದಲ್ಲಿ ೬೮ ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಹುಲಿ ಯೋಜನೆ ನಿರ್ದೇಶಕ ರಮೇಶ್‌ಕುಮಾರ್ ಮಾತನಾಡಿ ಕಳ್ಳಬೇಟೆ ತಡೆಯುವ ನಿಟ್ಟಿನಲ್ಲಿ ಗನ್ ಸೌಂಡ್ ಗ್ರಹಿಸಿ ಮಾಹಿತಿ ನೀಡುವ ತಂತ್ರಜ್ಞಾನ ಮತ್ತು ಡ್ರೋಣ್ ತಂತ್ರಜ್ಞಾನ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.

೨೦೦೬ ರಿಂದ ನಾಲ್ಕು ವರ್ಷಕ್ಕೊಮ್ಮೆ ಹುಲಿ ಗಣತಿ ನಡೆಯುತಿದ್ದು, ೨೦೧೮ ರ ಗಣತಿ ಪ್ರಕಾರ ದೇಶದಲ್ಲಿ ೨೯೬೭ ಹುಲಿಗಳಿದ್ದು, ಬಂಡೀಪುರದ ೬೦೦ ಕಡೆ ಹುಲಿ ಪಟ್ಟೆ ಧೃಡಪಡಿಸಲು ಎರಡು ಬದಿಯಲ್ಲಿ ಕ್ಯಾಮರ ಇಟ್ಟು, ೨೦೨೨ ಮೇ ನಲ್ಲಿ ಸಂಗ್ರಹವಾದ ಡಾಟಾವನ್ನು ಎನ್‌ಟಿಸಿಎ ನೀಡಿದ್ದೇವೆ. ಮಾರ್ಚ್ ವೇಳೆಗೆ ಹುಲಿಗಳ ಸಂಖ್ಯೆ ತಿಳಿಯಲಿದೆ ಎಂದರು. ೧೯೭೩ ರಲ್ಲಿ ಬಂಡೀಪುರ ಹುಲಿ ಯೋಜನೆ ಪ್ರಾರಂಭವಾಗಿದೆ. ಕೋರ್ ಮತ್ತು ಬಫರ್ ಜೋನ್ ಒಳಗೊಂಡು ಉದ್ಯಾನ ೧೨೫೦ ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಅರಣ್ಯದ ಗುಣಮಟ್ಟ ಎಲ್ಲಾ ರೀತಿಯಲ್ಲೂ ಉತ್ತಮ ಆಗಿದೆ. ಇದಕ್ಕಾಗಿ ಉದ್ಯಾನಕ್ಕೆ ೯೭.೫ ಅಂಕ ಬಂದಿದ್ದು, ನಿರ್ವಹಣೆ ವಿಷಯದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಅಲ್ಲದೇ ಬಂಡೀಪುರ ವಲಯವನ್ನು ಲಂಟಾನ ಮುಕ್ತ ಮಾಡುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು. ಉದ್ಯಾನದಂಚಿನ ಕೃಷಿ ಭೂಮಿಗಳಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ನಿಗಾ ಇಡಲಾಗಿದ್ದು, ಪ್ರಾದೇಶಿಕ ನಿರ್ದೇಶಕರ ನೇತೃತ್ವದ ಸಭೆಯಲ್ಲಿ ಆದ ತೀರ್ಮಾನದಂತೆ ೧೫೦೦ ಕಡೆಗಳಲ್ಲಿ ಇದುವರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದು ತಿಳಿಸಿದರು. ಮಾನವ ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸೋಲಾರ್ ವಿದ್ಯುತ್ ತಂತಿ ಬೇಲಿ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಇತರೆ ಎಲ್ಲಾ ಕ್ರಮಗಳು ಆಗಿದೆ. ಜತೆಗೆ ಈ ಭಾರಿ ಬೆಳೆ ಹಾನಿ ಪರಿಹಾರ ನೀಡಿದ್ದೇವೆ. ಶೇ.೪೦ ನೌಕರರ ಕೊರತೆ ಇರುವುದು ಸಮಸ್ಯೆಯಾಗಿದೆ ಎಂದು ಮಾಹಿತಿ ನೀಡಿದರು. ೧೩ ಕ್ಕಿಂತ ಹೆಚ್ಚಿಗೆ ಆನೆಗಳು ಇರುವಂತಿಲ್ಲ ಎಂಬ ನಿಯಮದ ಹಿನ್ನೆಲೆಯಲ್ಲಿ ಬಂಡೀಪುರ ಕೇಂದ್ರ ಸ್ಥಾನದಲ್ಲಿ ಮತ್ತೊಂದು ಸಾಕಾನೆ ಆನೆ ಕ್ಯಾಂಪ್ ಆರಂಭಿಸುವ ಉದ್ದೇಶ ಇದೆ ಎಂದು ಮಾಹಿತಿ ನೀಡಿದರು.

ಪ್ರಕೃತಿ ಕರೆ ಇತರೆ ಕಾರಣಗಳಿಗೆ ಉದ್ಯಾನದ ನಡುವಿನ ರಾಷ್ಟಿçÃಯ ಹೆದ್ದಾರಿಯ ಅಲ್ಲಲ್ಲಿ ವಾಹನ ನಿಲುಗಡೆ ತಡೆಯಲು ಚೆಕ್‌ಪೋಸ್ಟ್ಗಳ ಬಳಿ ಶೌಚಾಲಯ ವ್ಯವಸ್ಥೆ ಮಾಡುವ ಭರವಸೆ ನೀಡಿದರು.

ಅರಣ್ಯ ಮತ್ತು ವನ್ಯಜೀವಿ ದೇಶದ ಸಂಪತ್ತಾಗಿದ್ದು, ಇವುಗಳನ್ನು ರಕ್ಷಿಸಲು ಮಾಧ್ಯಮದವರು ಸಹಕಾರ ನೀಡಬೇಕು. ಉದ್ಯಾನದ ಬಗ್ಗೆ ಸಕಾರಾತ್ಮಕ ವರದಿಗಳನ್ನು ಪ್ರಕಟಿಸುವ ಮೂಲಕ ನೆರವಾಗಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಪರಮೇಶ್, ನವೀನಕುಮಾರ್ ಹಾಜರಿದ್ದರು.

andolana

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

9 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

9 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

9 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

9 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

10 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

10 hours ago