ಚಾಮರಾಜನಗರ

ಬಂಡೀಪುರದಲ್ಲಿ ಮತ್ತೊಂದು ಸಾಕಾನೆ ಕ್ಯಾಂಪ್

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರದ ಸಭಾಂಗಣದಲ್ಲಿ ೬೮ ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಹುಲಿ ಯೋಜನೆ ನಿರ್ದೇಶಕ ರಮೇಶ್‌ಕುಮಾರ್ ಮಾತನಾಡಿ ಕಳ್ಳಬೇಟೆ ತಡೆಯುವ ನಿಟ್ಟಿನಲ್ಲಿ ಗನ್ ಸೌಂಡ್ ಗ್ರಹಿಸಿ ಮಾಹಿತಿ ನೀಡುವ ತಂತ್ರಜ್ಞಾನ ಮತ್ತು ಡ್ರೋಣ್ ತಂತ್ರಜ್ಞಾನ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.

೨೦೦೬ ರಿಂದ ನಾಲ್ಕು ವರ್ಷಕ್ಕೊಮ್ಮೆ ಹುಲಿ ಗಣತಿ ನಡೆಯುತಿದ್ದು, ೨೦೧೮ ರ ಗಣತಿ ಪ್ರಕಾರ ದೇಶದಲ್ಲಿ ೨೯೬೭ ಹುಲಿಗಳಿದ್ದು, ಬಂಡೀಪುರದ ೬೦೦ ಕಡೆ ಹುಲಿ ಪಟ್ಟೆ ಧೃಡಪಡಿಸಲು ಎರಡು ಬದಿಯಲ್ಲಿ ಕ್ಯಾಮರ ಇಟ್ಟು, ೨೦೨೨ ಮೇ ನಲ್ಲಿ ಸಂಗ್ರಹವಾದ ಡಾಟಾವನ್ನು ಎನ್‌ಟಿಸಿಎ ನೀಡಿದ್ದೇವೆ. ಮಾರ್ಚ್ ವೇಳೆಗೆ ಹುಲಿಗಳ ಸಂಖ್ಯೆ ತಿಳಿಯಲಿದೆ ಎಂದರು. ೧೯೭೩ ರಲ್ಲಿ ಬಂಡೀಪುರ ಹುಲಿ ಯೋಜನೆ ಪ್ರಾರಂಭವಾಗಿದೆ. ಕೋರ್ ಮತ್ತು ಬಫರ್ ಜೋನ್ ಒಳಗೊಂಡು ಉದ್ಯಾನ ೧೨೫೦ ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಅರಣ್ಯದ ಗುಣಮಟ್ಟ ಎಲ್ಲಾ ರೀತಿಯಲ್ಲೂ ಉತ್ತಮ ಆಗಿದೆ. ಇದಕ್ಕಾಗಿ ಉದ್ಯಾನಕ್ಕೆ ೯೭.೫ ಅಂಕ ಬಂದಿದ್ದು, ನಿರ್ವಹಣೆ ವಿಷಯದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಅಲ್ಲದೇ ಬಂಡೀಪುರ ವಲಯವನ್ನು ಲಂಟಾನ ಮುಕ್ತ ಮಾಡುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು. ಉದ್ಯಾನದಂಚಿನ ಕೃಷಿ ಭೂಮಿಗಳಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ನಿಗಾ ಇಡಲಾಗಿದ್ದು, ಪ್ರಾದೇಶಿಕ ನಿರ್ದೇಶಕರ ನೇತೃತ್ವದ ಸಭೆಯಲ್ಲಿ ಆದ ತೀರ್ಮಾನದಂತೆ ೧೫೦೦ ಕಡೆಗಳಲ್ಲಿ ಇದುವರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದು ತಿಳಿಸಿದರು. ಮಾನವ ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸೋಲಾರ್ ವಿದ್ಯುತ್ ತಂತಿ ಬೇಲಿ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಇತರೆ ಎಲ್ಲಾ ಕ್ರಮಗಳು ಆಗಿದೆ. ಜತೆಗೆ ಈ ಭಾರಿ ಬೆಳೆ ಹಾನಿ ಪರಿಹಾರ ನೀಡಿದ್ದೇವೆ. ಶೇ.೪೦ ನೌಕರರ ಕೊರತೆ ಇರುವುದು ಸಮಸ್ಯೆಯಾಗಿದೆ ಎಂದು ಮಾಹಿತಿ ನೀಡಿದರು. ೧೩ ಕ್ಕಿಂತ ಹೆಚ್ಚಿಗೆ ಆನೆಗಳು ಇರುವಂತಿಲ್ಲ ಎಂಬ ನಿಯಮದ ಹಿನ್ನೆಲೆಯಲ್ಲಿ ಬಂಡೀಪುರ ಕೇಂದ್ರ ಸ್ಥಾನದಲ್ಲಿ ಮತ್ತೊಂದು ಸಾಕಾನೆ ಆನೆ ಕ್ಯಾಂಪ್ ಆರಂಭಿಸುವ ಉದ್ದೇಶ ಇದೆ ಎಂದು ಮಾಹಿತಿ ನೀಡಿದರು.

ಪ್ರಕೃತಿ ಕರೆ ಇತರೆ ಕಾರಣಗಳಿಗೆ ಉದ್ಯಾನದ ನಡುವಿನ ರಾಷ್ಟಿçÃಯ ಹೆದ್ದಾರಿಯ ಅಲ್ಲಲ್ಲಿ ವಾಹನ ನಿಲುಗಡೆ ತಡೆಯಲು ಚೆಕ್‌ಪೋಸ್ಟ್ಗಳ ಬಳಿ ಶೌಚಾಲಯ ವ್ಯವಸ್ಥೆ ಮಾಡುವ ಭರವಸೆ ನೀಡಿದರು.

ಅರಣ್ಯ ಮತ್ತು ವನ್ಯಜೀವಿ ದೇಶದ ಸಂಪತ್ತಾಗಿದ್ದು, ಇವುಗಳನ್ನು ರಕ್ಷಿಸಲು ಮಾಧ್ಯಮದವರು ಸಹಕಾರ ನೀಡಬೇಕು. ಉದ್ಯಾನದ ಬಗ್ಗೆ ಸಕಾರಾತ್ಮಕ ವರದಿಗಳನ್ನು ಪ್ರಕಟಿಸುವ ಮೂಲಕ ನೆರವಾಗಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಪರಮೇಶ್, ನವೀನಕುಮಾರ್ ಹಾಜರಿದ್ದರು.

andolana

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

3 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

4 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

4 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

5 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

6 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

6 hours ago