ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರದ ಸಭಾಂಗಣದಲ್ಲಿ ೬೮ ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಹುಲಿ ಯೋಜನೆ ನಿರ್ದೇಶಕ ರಮೇಶ್ಕುಮಾರ್ ಮಾತನಾಡಿ ಕಳ್ಳಬೇಟೆ ತಡೆಯುವ ನಿಟ್ಟಿನಲ್ಲಿ ಗನ್ ಸೌಂಡ್ ಗ್ರಹಿಸಿ ಮಾಹಿತಿ ನೀಡುವ ತಂತ್ರಜ್ಞಾನ ಮತ್ತು ಡ್ರೋಣ್ ತಂತ್ರಜ್ಞಾನ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
೨೦೦೬ ರಿಂದ ನಾಲ್ಕು ವರ್ಷಕ್ಕೊಮ್ಮೆ ಹುಲಿ ಗಣತಿ ನಡೆಯುತಿದ್ದು, ೨೦೧೮ ರ ಗಣತಿ ಪ್ರಕಾರ ದೇಶದಲ್ಲಿ ೨೯೬೭ ಹುಲಿಗಳಿದ್ದು, ಬಂಡೀಪುರದ ೬೦೦ ಕಡೆ ಹುಲಿ ಪಟ್ಟೆ ಧೃಡಪಡಿಸಲು ಎರಡು ಬದಿಯಲ್ಲಿ ಕ್ಯಾಮರ ಇಟ್ಟು, ೨೦೨೨ ಮೇ ನಲ್ಲಿ ಸಂಗ್ರಹವಾದ ಡಾಟಾವನ್ನು ಎನ್ಟಿಸಿಎ ನೀಡಿದ್ದೇವೆ. ಮಾರ್ಚ್ ವೇಳೆಗೆ ಹುಲಿಗಳ ಸಂಖ್ಯೆ ತಿಳಿಯಲಿದೆ ಎಂದರು. ೧೯೭೩ ರಲ್ಲಿ ಬಂಡೀಪುರ ಹುಲಿ ಯೋಜನೆ ಪ್ರಾರಂಭವಾಗಿದೆ. ಕೋರ್ ಮತ್ತು ಬಫರ್ ಜೋನ್ ಒಳಗೊಂಡು ಉದ್ಯಾನ ೧೨೫೦ ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಅರಣ್ಯದ ಗುಣಮಟ್ಟ ಎಲ್ಲಾ ರೀತಿಯಲ್ಲೂ ಉತ್ತಮ ಆಗಿದೆ. ಇದಕ್ಕಾಗಿ ಉದ್ಯಾನಕ್ಕೆ ೯೭.೫ ಅಂಕ ಬಂದಿದ್ದು, ನಿರ್ವಹಣೆ ವಿಷಯದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಅಲ್ಲದೇ ಬಂಡೀಪುರ ವಲಯವನ್ನು ಲಂಟಾನ ಮುಕ್ತ ಮಾಡುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು. ಉದ್ಯಾನದಂಚಿನ ಕೃಷಿ ಭೂಮಿಗಳಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ನಿಗಾ ಇಡಲಾಗಿದ್ದು, ಪ್ರಾದೇಶಿಕ ನಿರ್ದೇಶಕರ ನೇತೃತ್ವದ ಸಭೆಯಲ್ಲಿ ಆದ ತೀರ್ಮಾನದಂತೆ ೧೫೦೦ ಕಡೆಗಳಲ್ಲಿ ಇದುವರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದು ತಿಳಿಸಿದರು. ಮಾನವ ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸೋಲಾರ್ ವಿದ್ಯುತ್ ತಂತಿ ಬೇಲಿ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಇತರೆ ಎಲ್ಲಾ ಕ್ರಮಗಳು ಆಗಿದೆ. ಜತೆಗೆ ಈ ಭಾರಿ ಬೆಳೆ ಹಾನಿ ಪರಿಹಾರ ನೀಡಿದ್ದೇವೆ. ಶೇ.೪೦ ನೌಕರರ ಕೊರತೆ ಇರುವುದು ಸಮಸ್ಯೆಯಾಗಿದೆ ಎಂದು ಮಾಹಿತಿ ನೀಡಿದರು. ೧೩ ಕ್ಕಿಂತ ಹೆಚ್ಚಿಗೆ ಆನೆಗಳು ಇರುವಂತಿಲ್ಲ ಎಂಬ ನಿಯಮದ ಹಿನ್ನೆಲೆಯಲ್ಲಿ ಬಂಡೀಪುರ ಕೇಂದ್ರ ಸ್ಥಾನದಲ್ಲಿ ಮತ್ತೊಂದು ಸಾಕಾನೆ ಆನೆ ಕ್ಯಾಂಪ್ ಆರಂಭಿಸುವ ಉದ್ದೇಶ ಇದೆ ಎಂದು ಮಾಹಿತಿ ನೀಡಿದರು.
ಪ್ರಕೃತಿ ಕರೆ ಇತರೆ ಕಾರಣಗಳಿಗೆ ಉದ್ಯಾನದ ನಡುವಿನ ರಾಷ್ಟಿçÃಯ ಹೆದ್ದಾರಿಯ ಅಲ್ಲಲ್ಲಿ ವಾಹನ ನಿಲುಗಡೆ ತಡೆಯಲು ಚೆಕ್ಪೋಸ್ಟ್ಗಳ ಬಳಿ ಶೌಚಾಲಯ ವ್ಯವಸ್ಥೆ ಮಾಡುವ ಭರವಸೆ ನೀಡಿದರು.
ಅರಣ್ಯ ಮತ್ತು ವನ್ಯಜೀವಿ ದೇಶದ ಸಂಪತ್ತಾಗಿದ್ದು, ಇವುಗಳನ್ನು ರಕ್ಷಿಸಲು ಮಾಧ್ಯಮದವರು ಸಹಕಾರ ನೀಡಬೇಕು. ಉದ್ಯಾನದ ಬಗ್ಗೆ ಸಕಾರಾತ್ಮಕ ವರದಿಗಳನ್ನು ಪ್ರಕಟಿಸುವ ಮೂಲಕ ನೆರವಾಗಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಪರಮೇಶ್, ನವೀನಕುಮಾರ್ ಹಾಜರಿದ್ದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…