ಚಾಮರಾಜನಗರ

ಬಂಡಿಪುರದಲ್ಲಿ ಮತ್ತೊಂದು ಸಾಕಾನೆ ಆನೆ ಕ್ಯಾಂಪ್

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರದ ಸಭಾಂಗಣದಲ್ಲಿ ೬೮ ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಡೆದ ಮಾಧ್ಯಮದವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಹುಲಿ ಯೋಜನೆ ನಿರ್ದೇಶಕ ರಮೇಶ್‌ಕುಮಾರ್ ಮಾತನಾಡಿ ಕಳ್ಳಬೇಟೆ ತಡೆಯುವ ನಿಟ್ಟಿನಲ್ಲಿ ಗನ್ ಸೌಂಡ್ ಗ್ರಹಿಸಿ ಮಾಹಿತಿ ನೀಡುವ ತಂತ್ರಜ್ಞಾನ ಮತ್ತು ಡ್ರೋಣ್ ತಂತ್ರಜ್ಞಾನ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.

೨೦೦೬ ರಿಂದ ನಾಲ್ಕು ವರ್ಷಕ್ಕೊಮ್ಮೆ ಹುಲಿ ಗಣತಿ ನಡೆಯುತಿದ್ದು, ೨೦೧೮ ರ ಗಣತಿ ಪ್ರಕಾರ ದೇಶದಲ್ಲಿ ೨೯೬೭ ಹುಲಿಗಳಿದ್ದು, ಬಂಡೀಪುರದ ೬೦೦ ಕಡೆ ಹುಲಿ ಪಟ್ಟೆ ಧೃಡಪಡಿಸಲು ಎರಡು ಬದಿಯಲ್ಲಿ ಕ್ಯಾಮರ ಇಟ್ಟು, ೨೦೨೨ ಮೇ ನಲ್ಲಿ ಸಂಗ್ರಹವಾದ ಡಾಟಾವನ್ನು ಎನ್‌ಟಿಸಿಎ ನೀಡಿದ್ದೇವೆ. ಮಾರ್ಚ್ ವೇಳೆಗೆ ಹುಲಿಗಳ ಸಂಖ್ಯೆ ತಿಳಿಯಲಿದೆ ಎಂದರು. ೧೯೭೩ ರಲ್ಲಿ ಬಂಡೀಪುರ ಹುಲಿ ಯೋಜನೆ ಪ್ರಾರಂಭವಾಗಿದೆ. ಕೋರ್ ಮತ್ತು ಬಫರ್ ಜೋನ್ ಒಳಗೊಂಡು ಉದ್ಯಾನ ೧೨೫೦ ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಅರಣ್ಯದ ಗುಣಮಟ್ಟ ಎಲ್ಲಾ ರೀತಿಯಲ್ಲೂ ಉತ್ತಮ ಆಗಿದೆ. ಇದಕ್ಕಾಗಿ ಉದ್ಯಾನಕ್ಕೆ ೯೭.೫ ಅಂಕ ಬಂದಿದ್ದು, ನಿರ್ವಹಣೆ ವಿಷಯದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಅಲ್ಲದೇ ಬಂಡೀಪುರ ವಲಯವನ್ನು ಲಂಟಾನ ಮುಕ್ತ ಮಾಡುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು. ಉದ್ಯಾನದಂಚಿನ ಕೃಷಿ ಭೂಮಿಗಳಲ್ಲಿ ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ನಿಗಾ ಇಡಲಾಗಿದ್ದು, ಪ್ರಾದೇಶಿಕ ನಿರ್ದೇಶಕರ ನೇತೃತ್ವದ ಸಭೆಯಲ್ಲಿ ಆದ ತೀರ್ಮಾನದಂತೆ ೧೫೦೦ ಕಡೆಗಳಲ್ಲಿ ಇದುವರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದು ತಿಳಿಸಿದರು. ಮಾನವ ಪ್ರಾಣಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸೋಲಾರ್ ವಿದ್ಯುತ್ ತಂತಿ ಬೇಲಿ, ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಇತರೆ ಎಲ್ಲಾ ಕ್ರಮಗಳು ಆಗಿದೆ. ಜತೆಗೆ ಈ ಭಾರಿ ಬೆಳೆ ಹಾನಿ ಪರಿಹಾರ ನೀಡಿದ್ದೇವೆ. ಶೇ.೪೦ ನೌಕರರ ಕೊರತೆ ಇರುವುದು ಸಮಸ್ಯೆಯಾಗಿದೆ ಎಂದು ಮಾಹಿತಿ ನೀಡಿದರು. ೧೩ ಕ್ಕಿಂತ ಹೆಚ್ಚಿಗೆ ಆನೆಗಳು ಇರುವಂತಿಲ್ಲ ಎಂಬ ನಿಯಮದ ಹಿನ್ನೆಲೆಯಲ್ಲಿ ಬಂಡೀಪುರ ಕೇಂದ್ರ ಸ್ಥಾನದಲ್ಲಿ ಮತ್ತೊಂದು ಸಾಕಾನೆ ಆನೆ ಕ್ಯಾಂಪ್ ಆರಂಭಿಸುವ ಉದ್ದೇಶ ಇದೆ ಎಂದು ಮಾಹಿತಿ ನೀಡಿದರು.

ಪ್ರಕೃತಿ ಕರೆ ಇತರೆ ಕಾರಣಗಳಿಗೆ ಉದ್ಯಾನದ ನಡುವಿನ ರಾಷ್ಟಿçÃಯ ಹೆದ್ದಾರಿಯ ಅಲ್ಲಲ್ಲಿ ವಾಹನ ನಿಲುಗಡೆ ತಡೆಯಲು ಚೆಕ್‌ಪೋಸ್ಟ್ಗಳ ಬಳಿ ಶೌಚಾಲಯ ವ್ಯವಸ್ಥೆ ಮಾಡುವ ಭರವಸೆ ನೀಡಿದರು.

ಅರಣ್ಯ ಮತ್ತು ವನ್ಯಜೀವಿ ದೇಶದ ಸಂಪತ್ತಾಗಿದ್ದು, ಇವುಗಳನ್ನು ರಕ್ಷಿಸಲು ಮಾಧ್ಯಮದವರು ಸಹಕಾರ ನೀಡಬೇಕು. ಉದ್ಯಾನದ ಬಗ್ಗೆ ಸಕಾರಾತ್ಮಕ ವರದಿಗಳನ್ನು ಪ್ರಕಟಿಸುವ ಮೂಲಕ ನೆರವಾಗಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೆ.ಪರಮೇಶ್, ನವೀನಕುಮಾರ್ ಹಾಜರಿದ್ದರು.

andolana

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago