ಚಾಮರಾಜನಗರ

ಮಲೆ ಮಹದೇಶ್ವರದಲ್ಲಿ ವನ್ಯಜೀವಿಧಾಮದಲ್ಲಿ ಬೇಟೆಗಾರರ ಕ್ರೌರ್ಯಕ್ಕೆ ಮತ್ತೊಂದು ಕಡವೆ ಬಲಿ: ಮೂರು ತುಂಡು ಮಾಡಿ ಪರಾರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಅಮಾನವೀಯ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ.

ಹನೂರು ವಲಯದ ಉಡುತೊರೆಹಳ್ಳ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ನೀರು ಕುಡಿಯಲು ಬಂದಿದ್ದ ಕಡವೆ ಮೇಲೆ ನಾಡಬಂದೂಕಿನಿಂದ ಗುಂಡು ಹಾರಿಸಿ ಬೇಟೆಯಾಡಿರುವ ದುಷ್ಕರ್ಮಿಗಳು, ನಂತರ ಅದನ್ನು ಮೂರು ಭಾಗಗಳಾಗಿ ಕತ್ತರಿಸಿ ಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕಂಡು, ಆರೋಪಿಗಳು ಕಡವೆ ಮಾಂಸದ ಚೀಲಗಳನ್ನು ಸ್ಥಳದಲ್ಲೇ ಬಿಟ್ಟು ದಟ್ಟ ಅರಣ್ಯದಲ್ಲಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಬಫರ್ ವಲಯದ ವಲಯ ಅರಣ್ಯಾಧಿಕಾರಿ ಮಹೇಶ್ ಅವರು ಪ್ರಕರಣ ದಾಖಲಿಸಿಕೊಂಡು, ಪರಾರಿಯಾಗಿರುವ ಬೇಟೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತ ಬೇಟೆಗಾರರ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆಯ ಗಸ್ತು ಹೆಚ್ಚಿಸುವಂತೆ ವನ್ಯಪ್ರೇಮಿಗಳು ಆಗ್ರಹಿಸಿದ್ದಾರೆ.

ಪಶುವೈದ್ಯಾಧಿಕಾರಿ ಡಾ. ಶಿವರಾಜು ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

5 hours ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

5 hours ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

5 hours ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

5 hours ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

5 hours ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

6 hours ago