ಚಾಮರಾಜನಗರ

ಹನೂರು| ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಮತ್ತೊಂದು ಚಿರತೆ ಸೆರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ಇಂಡಿಗನತ್ತ, ನಾಗಮಲೆ ಗ್ರಾಮಗಳಲ್ಲಿ ಹಲವಾರು ದಿನಗಳಿಂದ ರೈತರ ನಿದ್ದೆಗಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಕಳೆದ ಮೇ.10ರಂದು ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳುವಾಗ ಬೆಂಗಳೂರಿನ ಹರ್ಷಿತ್ ಎಂಬ ಬಾಲಕ ಚಿರತೆ ದಾಳಿಯಿಂದ ಮೃತಪಟ್ಟಿದ್ದನು. ಕಾವೇರಿ ವನ್ಯಜೀವಿಧಾಮದ ಸಿಬ್ಬಂದಿಗಳು ವಿವಿಧ ಮಾದರಿಯ ಮೂರು ಬೋನ್‌ಗಳನ್ನು ಇಟ್ಟು ಕಾರ್ಯಾಚರಣೆ ನಡೆಸುತ್ತಿದ್ದರು. 15 ದಿನಗಳ ನಂತರ ಹೆಣ್ಣು ಚಿರತೆಯೊಂದು ತು‌ಮಕೂರು ಮಾದರಿ ಬೋನಿಗೆ ಸೆರೆಯಾಗಿತ್ತು. ರಕ್ತದ ಮಾದರಿ, ಕ್ಯಾಮರಾ ಟ್ರಾಪ್ ನಲ್ಲಿ ಸೆರೆಸಿಕ್ಕ ಚಿರತೆಯ ದೃಶ್ಯಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ತಜ್ಞರಿಗೆ ರವಾನೆ ಮಾಡಿ ಬಾಲಕನ ಸಾವಿಗೆ ಕಾರಣವಾದ ಚಿರತೆ ಬಗ್ಗೆ ದೃಢಪಡಿಸಿ ಸೆರೆ ಸಿಕ್ಕ ಚಿರತೆಯನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ ಮಾಡಲಾಗುವುದು ಎಂದು ಕಾವೇರಿ ವನ್ಯಜೀವಿಧಾಮದ ಡಿಸಿಎಫ್ ಆಗಿದ್ದ ಸುರೇಂದ್ರ ಮಾಹಿತಿ ನೀಡಿದ್ದರು.

ಇನ್ನೊಂದೆಡೆ ನಾಗಮಲೆಯಲ್ಲಿ ಮತ್ತೊಂದು ಚಿರತೆ ಮೇ.24ರ ಬೆಳಗ್ಗೆ ಕಾಣಿಸಿಕೊಂಡಿತ್ತು. ಚಿರತೆ ಸೆರೆಗಾಗಿ ಎರಡು ಬೋನ್‌ಗಳನ್ನು ಇಡಲಾಗಿತ್ತು.

ಆದರೂ ಚಾಲಾಕಿ ಚಿರತೆ ರೈತರು ಸಾಕಿದ್ದ ಸಾಕು ನಾಯಿಗಳು, ಮೇಕೆಗಳನ್ನು ತಿಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿತ್ತು. ಇದೀಗ 25 ದಿನಗಳ ಬಳಿಕ ಮತ್ತೊಂದು ಚಿರತೆ ಸೆರೆಹಿಡಿಯಲಾಗಿದೆ. ಇದರಿಂದ ಮಲೆ ಮಹದೇಶ್ವರ ಬೆಟ್ಟ ತಪ್ಪಲಿನ ರೈತರು ತಕ್ಕಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

6 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

7 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

7 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

8 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

8 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

11 hours ago