ಚಾಮರಾಜನಗರ: ಚಾಮರಾಜನಗರ ತಾಲ್ಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡುತ್ತಿದ್ದ ಮತ್ತೊಂದು ಹುಲಿಯನ್ನು ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ.
ಕಳೆದ 10 ದಿನಗಳಿಂದ ತಾಯಿ ಹುಲಿ ಹಾಗೂ ನಾಲ್ಕು ಹುಲಿ ಮರಿಗಳ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಐದು ಸಾಕಾನೆಗಳನ್ನು ಬಳಸಿಕೊಂಡು ಹುಲಿಯನ್ನು ಹೇಗಾದರೂ ಮಾಡಿ ಸೆರೆ ಹಿಡಿಯಬೇಕು ಎಂದು ಪಣ ತೊಟ್ಟಿದ್ದರು.
ಚಾಮರಾಜನಗರ ತಾಲ್ಲೂಕಿನ ನಂಜೇದೇವನಪುರ, ಉಡಿಗಾಲ, ವೀರನಪುರ, ಕೆ.ಕೆ.ಹುಂಡಿ ಸೇರಿದಂತೆ ಏಳು ಗ್ರಾಮಗಳಲ್ಲಿ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.
ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿ ಹಗಲು ರಾತ್ರಿ ಎನ್ನದೇ ಹುಲಿಗಳನ್ನು ಸೆರೆ ಹಿಡಿಯಬೇಕು ಎಂದು ಪಣ ತೊಟ್ಟಿದ್ದರು.
ಈಗ ಚಾಮರಾಜನಗರ ತಾಲ್ಲೂಕಿನ ವೀರನಪುರ ಗ್ರಾಮದ ಜಮೀನಿನೊಂದರಲ್ಲಿ ಹುಲಿಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಆದರೆ ಈ ಹುಲಿಯು ಮರಿಗಳೊಂದಿಗೆ ಕಾಣಿಸಿಕೊಳ್ಳುತ್ತಿದ್ದ ಹುಲಿಯಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ತಾಯಿ ಹಾಗೂ ನಾಲ್ಕು ಮರಿಗಳೊಂದಿಗೆ ಕಾಣಿಸಿಕೊಳ್ಳುತ್ತಿದ್ದ ಹುಲಿಯನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮತ್ತೆ ಕಾರ್ಯಾಚರಣೆ ಕೈಗೊಳ್ಳಲಿದ್ದಾರಾ ಎಂಬುದನ್ನು ಕಾದುನೋಡಬೇಕಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…