ಚಾಮರಾಜನಗರ

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು 

ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು, ಈ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಕಾಡಾನೆ ನಿಯಂತ್ರಿಸುವಲ್ಲಿ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಹಾಗೂ ಕಾಡಾನೆಗಳನ್ನು ನಿಯಂತ್ರಣ ಮಾಡುವಂತೆ ಒತ್ತಾಯಿಸಿ ಓಂಕಾರ್ ಅರಣ್ಯ ವಲಯಾಧಿಕಾರಿಗಳ ಕಚೇರಿಗೆ ತೆರಳಿ ರೈತರು ಮನವಿ ಸಲ್ಲಿಸಿದರು.

ವಲಯಾಧಿಕಾರಿ ಹನುಮಂತಪ್ಪ ಪಾಟೀಲ್‌ರಿಗೆ ಮನವಿ ಸಲ್ಲಿಸಿ ಮಾತನಾಡಿದ ರೈತರು, ಮಂಚಹಳ್ಳಿ ಗ್ರಾಮದಲ್ಲಿ ಸತತವಾಗಿ ಕಾಡಾನೆಗಳ ಹಾವಳಿಯಿಂದ ರೈತರ ಜಮೀನಲ್ಲಿ ಅಳವಡಿಸಿರುವ ಸುತ್ತುಬೇಲಿ, ಕೃಷಿಗೆ ಬಳಸುವ ಪೈಪ್‌ಗಳು, ತೆಂಗು, ಸೇರಿದಂತೆ ತರಕಾರಿ ಬೆಳೆಗಳು ನಾಶವಾಗುತ್ತಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು ಅಪಾರ ನಷ್ಟವಾಗಿದೆ. ಕೂಡಲೇ ಪರಿಹಾರ ನೀಡಬೇಕು ಹಾಗೂ ಕಾಡಾನೆಗಳನ್ನು ಜಮೀನುಗಳಿಗೆ ಬರದಂತೆ ನಿಯಂತ್ರಿಸಲು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಂಚಳ್ಳಿ ಗ್ರಾಮದ ಎಂ ನಂದೀಶ್, ಮಾದೇಶ, ವಿಶ್ವನಾಥ್, ಮಹದೇವಪ್ಪ, ಎಂ ಆರ್ ಮಹದೇವಪ್ಪ, ಮೀಸೆ ಮಹದೇವಪ್ಪ, ನಂಜುಂಡಿ, ಗುರುಪ್ರಸಾದ್, ಭರತ್ ಕುಮಾರ್, ಸವಕನಳ್ಳಿ ಪಾಳ್ಯದ ಮಹದೇವು. ಮಹದೇವಯ್ಯ, ರಾಚಯ್ಯ, ಸುರೇಶ್, ಸೇರಿದಂತೆ ಮತ್ತಿತರರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago