ಚಾಮರಾಜನಗರ

ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಿಸಿ : ಗಡಿಜಿಲ್ಲೆಯಲ್ಲಿ ಪೋಷಕರಿಂದ ಪ್ರತಿಭಟನೆ

ಚಾಮರಾಜನಗರ : ಶಾಲೆಗೆ ಶಿಕ್ಷಕರನ್ನು ನೇಮಿಸುವಂತೆ ಆಗ್ರಹಿಸಿ ನಗರದ ಪಿಡಬ್ಲ್ಯೂಡಿ ಕಾಲೋನಿಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ( ಬಸವರಾಜೇಂದ್ರ ಮೆಡಿಕಲ್ ಟ್ರಸ್ಟ್ ದತ್ತು ಶಾಲೆ)ಯ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದರು.

ಶಾಲೆಯಲ್ಲಿ ಕಾಯಂ ಶಿಕ್ಷಕರು ಇಲ್ಲದೇ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಶಿಕ್ಷಣ ಇಲಾಖೆ ಶಿಕ್ಷಕರನ್ನು ನೇಮಕ ಮಾಡುವಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ನೇಮಕ ಮಾಡುತ್ತಿಲ್ಲ. ಇದರಿಂದ ಶಾಲೆಯಲ್ಲಿ  ಖಾಯಂ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಒಬ್ಬರು,  ಇಬ್ಬರು ಅತಿಥಿ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ.  ಅದರಲ್ಲಿ ಒಬ್ಬರು ಗೈರಾಗಿದ್ದಾರೆ. ಎಲ್ ಕೆಜಿ  ತರಗತಿಯಿಂದ 7 ರವರೆಗೆ  ಒಟ್ಟು 300 ಕ್ಕೂ ಹೆಚ್ಚು ಮಕ್ಕಳಿದ್ದಾರೆ. ಮಕ್ಕಳ ಪಾಠ ಪ್ರವಚನಕ್ಕೆ ತೊಂದರೆಯಾಗಿದೆ ಕಾಯಂ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಪೋಷಕರು ಆಗ್ರಹಿಸಿದರು.

ಶಾಲೆಯಲ್ಲಿ ಮಕ್ಕಳ ವ್ಯಾಸಂಗಕ್ಕೆ ಸಾಕಷ್ಟು ತೊಂದರೆಯಾಗಿದೆ. ಇದರಿಂದ ಮಕ್ಕಳಿಗೆ ಅನ್ಯಾಯವಾಗಿದೆ. ಇಲಾಖೆಯ ಅಧಿಕಾರಿಗಳು ಕೂಡಲೇ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು  ಪ್ರತಿಭಟನಾನಿರತರು ಪಟ್ಟು ಹಿಡಿದರು. ಇದಕ್ಕೆ ಡಿಡಿಪಿಐ ಕಚೇರಿಯ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ, ಪ್ರತಿಕ್ರಿಯಿಸಿ ಕೂಡಲೇ 2  ಶಿಕ್ಷಕರನ್ನು ನೇಮಕ ಮಾಡಲಾಗುವುದು. ಡಿಡಿಪಿಐ ಅವರೊಂದಿಗೆ ಚರ್ಚಿಸಿ ಶಿಕ್ಷಕರ ಕೊರತೆಯನ್ನು ಸರಿಪಡಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ಮೇಲೆ ಪೋಷಕರ ಪ್ರತಿಭಟನೆ ಕೈ ಬಿಟ್ಟು ಶಾಲೆಗೆ ಮಕ್ಕಳನ್ನು ಕಳುಹಿಸಿದರು.

ಪ್ರತಿಭಟನೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯ ಬಿಬಿಖುತೇಜ, ಪೋಷಕರಾದ ಪ್ರವೀಣ್, ಮನು, ತ್ಯಾಗರಾಜ, ಖಲೀಂವುಲ್ಲಾ, ಮಹೇಶ್, ಮಾದೇಶ್, ಜ್ಯೋತಿ ಹಾಗೂ ಮಕ್ಕಳು ಸೇರಿದಂತೆ ಇತರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago