ಚಾಮರಾಜನಗರ

ಹನೂರು | 50 ಹಾಸಿಗೆಗಳ ಆಸ್ಪತೆ ನಿರ್ಮಾಣಕ್ಕೆ ಅನುಮೋದನೆ

ಹನೂರು : ಪಟ್ಟಣದ ಕೇಂದ್ರ ಸ್ಥಾನದಲ್ಲಿ ೨೦ ಕೋಟಿ ರೂ. ವೆಚ್ಚದಲ್ಲಿ ೫೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿದ್ದು, ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಿ ಹನೂರು ಕ್ಷೇತ್ರದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮ.ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೂ ಮುನ್ನಾ ಹನೂರು ತಾಲ್ಲೂಕು ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು ಇದನ್ನು ಮೇಲ್ದರ್ಜೆಗೇರಿಸಿ ನೂರು ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಿಕೊಡುವಂತೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ೨೦ ಕೋಟಿ ರೂ. ವೆಚ್ಚದಲ್ಲಿ ೫೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಿದ್ದಾರೆ. ಆದರೆ ಹನೂರು ತಾಲ್ಲೂಕು ಕೇಂದ್ರದಲ್ಲಿ ೧೦೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಿದರೆ ನೂರಾರು ಕಿಲೋಮೀಟರ್ ವ್ಯಾಪ್ತಿಗಳಿಂದ ಬರುವ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಮತ್ತೊಮ್ಮೆ ಮನವಿ ಮಾಡಲಾಗಿತ್ತು. ಈ ವೇಳೆ ೨೦ ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭವಾಗಲಿ. ಮುಂದಿನ ದಿನಗಳಲ್ಲಿ ೨೦ ಕೋಟಿ ರೂ. ಅನುದಾನ ನೀಡಿ ೧೦೦ ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡೋಣ ಎಂದು ಭರವಸೆ ನೀಡಿದ್ದಾರೆ ಎಂದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಅಪಘಾತ ಹಾಗೂ ಹೃದಯಘಾತ ಸಂಭವಿಸಿದಾಗ ಆಕ್ಸಿಜನ್, ಆಂಬ್ಯುಲೆನ್ಸ್ ಗಳ ಸೇವೆ ಇಲ್ಲದೆ ಇರುವುದು ಗಮನಕ್ಕೆ ಬಂದಿದೆ. ಈ ವಿಚಾರವನ್ನು ಆರೋಗ್ಯ ಸಚಿವರ ಜೊತೆ ಚರ್ಚೆ ನಡೆಸಿ ತಾಲ್ಲೂಕಿಗೆ ಆಕ್ಸಿಜನ್ ಆಂಬ್ಯುಲೆನ್ಸ್ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

2 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

2 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

3 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

3 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

3 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

4 hours ago