ಚಾಮರಾಜನಗರ

ಹನೂರು | 50 ಹಾಸಿಗೆಗಳ ಆಸ್ಪತೆ ನಿರ್ಮಾಣಕ್ಕೆ ಅನುಮೋದನೆ

ಹನೂರು : ಪಟ್ಟಣದ ಕೇಂದ್ರ ಸ್ಥಾನದಲ್ಲಿ ೨೦ ಕೋಟಿ ರೂ. ವೆಚ್ಚದಲ್ಲಿ ೫೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿದ್ದು, ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಿ ಹನೂರು ಕ್ಷೇತ್ರದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮ.ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೂ ಮುನ್ನಾ ಹನೂರು ತಾಲ್ಲೂಕು ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು ಇದನ್ನು ಮೇಲ್ದರ್ಜೆಗೇರಿಸಿ ನೂರು ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಿಕೊಡುವಂತೆ ಮನವಿ ಮಾಡಲಾಗಿತ್ತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ೨೦ ಕೋಟಿ ರೂ. ವೆಚ್ಚದಲ್ಲಿ ೫೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಿದ್ದಾರೆ. ಆದರೆ ಹನೂರು ತಾಲ್ಲೂಕು ಕೇಂದ್ರದಲ್ಲಿ ೧೦೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಿದರೆ ನೂರಾರು ಕಿಲೋಮೀಟರ್ ವ್ಯಾಪ್ತಿಗಳಿಂದ ಬರುವ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳಲು ಅನುಕೂಲವಾಗುತ್ತದೆ ಎಂದು ಮತ್ತೊಮ್ಮೆ ಮನವಿ ಮಾಡಲಾಗಿತ್ತು. ಈ ವೇಳೆ ೨೦ ಕೋಟಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭವಾಗಲಿ. ಮುಂದಿನ ದಿನಗಳಲ್ಲಿ ೨೦ ಕೋಟಿ ರೂ. ಅನುದಾನ ನೀಡಿ ೧೦೦ ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡೋಣ ಎಂದು ಭರವಸೆ ನೀಡಿದ್ದಾರೆ ಎಂದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಅಪಘಾತ ಹಾಗೂ ಹೃದಯಘಾತ ಸಂಭವಿಸಿದಾಗ ಆಕ್ಸಿಜನ್, ಆಂಬ್ಯುಲೆನ್ಸ್ ಗಳ ಸೇವೆ ಇಲ್ಲದೆ ಇರುವುದು ಗಮನಕ್ಕೆ ಬಂದಿದೆ. ಈ ವಿಚಾರವನ್ನು ಆರೋಗ್ಯ ಸಚಿವರ ಜೊತೆ ಚರ್ಚೆ ನಡೆಸಿ ತಾಲ್ಲೂಕಿಗೆ ಆಕ್ಸಿಜನ್ ಆಂಬ್ಯುಲೆನ್ಸ್ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

12 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

16 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

18 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

19 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

20 hours ago