ಚಾಮರಾಜನಗರ

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ ನದಿ ಮೂಲದಿಂದ ನೀರು ತುಂಬಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯರವರು ಬಜೆಟ್ ನಲ್ಲಿ 490 ಕೋಟಿ ಯೋಜನೆ ಘೋಷಣೆ ಮಾಡಿರುವುದಕ್ಕೆ ರಾಮಪುರ ಸಮೀಪದ ಕೆಂಪಯ್ಯನಹಟ್ಟಿ ಗ್ರಾಮದ ಪುಟಾಣಿಗಳು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ವರ್ಷ2025 ರ ಜುಲೈ 8ರಂದು ಕೆಂಪಯ್ಯನ ಹಟ್ಟಿ ಗ್ರಾಮದ ವಿದ್ಯಾರ್ಥಿಗಳಾದ ವರ್ಣಿಕ, ಮೀನಾ, ಋಷಿಕೇಶ್, ಶ್ರೀಕಂಠ ಎಂಬ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಮ್ಮ ಗ್ರಾಮದಲ್ಲಿ ಪುಟ್ಟ ಮಕ್ಕಳು ನಮ್ಮ ತಾಯಿ ತಂದೆಯವರು ಕೃಷಿಯಲ್ಲಿ ಅನುಭವಿಸುತ್ತಿರುವ ಕಷ್ಟವನ್ನು ನೋಡಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಇದಲ್ಲದೆ ಇವರು ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ವೈರಲ್ ವಿಡಿಯೋನಲ್ಲಿ ಮಕ್ಕಳು ನಮ್ಮ ಗ್ರಾಮದಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿತಗೊಂಡಿದೆ. ಗ್ರಾಮದಲ್ಲಿ ನೀರಿನ ಕೊರತೆಯಿಂದ ಪ್ರಾಣಿ ಪಕ್ಷಿಗಳು ಸಹ ಪರಿತಪ್ಪಿಸುತ್ತಿವೆ. ಈ ಕಾರಣದಿಂದ ಗ್ರಾಮದಲ್ಲಿ ಕೃಷಿ ಚಟುವಟಿಕೆಗಳು ನಡೆಯದೆ ಜನರು ಬೇಸಾಯ ಬಿಟ್ಟು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದಾರೆ ಈ ಸ್ಥಿತಿಯನ್ನು ನೋಡಿದಾಗ ನಮಗೆ ಬಹಳ ದುಃಖವಾಗುತ್ತದೆ ಎಂದು ಅಳಲನ್ನು ತೋಡಿಕೊಂಡಿದ್ದರು. ರಾಮಪುರ ಹೋಬಳಿಯ ಎಲ್ಲಾ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಮಕ್ಕಳು ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಆಂದೋಲನ ದಿನ ಪತ್ರಿಕೆಯಲ್ಲಿ ಜುಲೈ 9 ರಂದು ರಾಮಪುರ ಹೋಬಳಿ ವ್ಯಾಪ್ತಿಯಲ್ಲಿರುವ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಮಗ್ರವಾಗಿ ವರದಿ ಪ್ರಕಟಿಸಲಾಗಿತ್ತು.

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಾಮಪುರ ಹೋಬಳಿ ವ್ಯಾಪ್ತಿಯ 12,ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ 490 ಕೋಟಿ ವೆಚ್ಚದ ಯೋಜನೆಗೆ ಅನುಮೋದನೆ ನೀಡಿರುವುದರಿಂದ ಶನಿವಾರ ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

16 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

16 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

16 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

16 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

16 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

16 hours ago