ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು
ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ ನಾಲ್ಕು ಪ್ರಚಾರ ವಾಹನಗಳಿಗೆ ಬೌದ್ಧ ಬಿಕ್ಕುಗಳು ಹಾಗೂ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ನಗರದಲ್ಲಿ ಗುರುವಾರ ಚಾಲನೆ ನೀಡಿದರು.
ನಗರದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಿಮಿತ್ತ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ಸಮಿತಿ, ಭಿಕ್ಕು ಸಂಘ, ಭಾರತೀಯ ಬೌದ್ಧ ಮಹಾಸಭಾದ ವತಿಯಿಂದ ಪ್ರಚಾರ ಹಮ್ಮಿಕೊಂಡಿದ್ದು, ರಾಮಸಮುದ್ರ ದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಪ್ರಚಾರ ವಾಹನಗಳಿಗೆ ಗಣ್ಯರು ಚಾಲನೆ ನೀಡಿದರು.
ನಂತರ, ಪ್ರಚಾರ ವಾಹನಗಳು ಬಿ.ರಾಚಯ್ಯ ಜೋಡಿ ರಸ್ತೆ, ಡೀವಿಯೇಷನ್ ರಸ್ತೆ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮಾರ್ಗವಾಗಿ ಗುಂಡ್ಲುಪೇಟೆ ವೃತ್ತ, ಸುಲ್ತಾನ್ ಷರೀಫ್ ವೃತ್ತ, ಸತ್ತಿ ರಸ್ತೆಯ ಮೂಲಕ ನಗರದ ಅಂಬೇಡ್ಕರ್ ಭವನವನ್ನು ತಲುಪಿತು. ಈ ಸಂದರ್ಭದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಮಾತನಾಡಿ, ಅಕ್ಟೋಬರ್ ೨೪ ಮತ್ತು ೨೫ ರಂದು ನಡೆಯುವ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ಪ್ರಯುಕ್ತ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸಾಗುವ ಬುದ್ಧ, ಅಂಬೇಡ್ಕರ್ ಪ್ರಚಾರ ವಾಹನಗಳಿಗೆ (ಟ್ಯಾಬ್ಲೋಗಳಿಗೆ) ಚಾಲನೆ ನೀಡಲಾಗಿದ್ದು, ಬೌದ್ಧಸಮ್ಮೇಳನಕ್ಕೆ ಇನ್ನು ೫೦ ದಿನಗಳು ಮಾತ್ರ ಬಾಕಿ ಇದೆ ಎಂದು ಹೇಳಿದರು.
ಧಮ್ಮ ಪಯಣದ ಈ ವಾಹನಗಳು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಕ್ಕೂ ಪಯಣ ಮಾಡಿ ಸಮ್ಮೇಳನಕ್ಕೆ ಗ್ರಾಮದವರನ್ನು ಆಹ್ವಾನ ಮಾಡುವುದು ಇದರ ಉದ್ದೇಶವಾಗಿದೆ. ಪ್ರತಿ ರಾತ್ರಿ ಆಯಾ ಗ್ರಾಮಗಳಲ್ಲಿ ವಾಸ್ತವ್ಯ ಮಾಡಲಿದ್ದು ಅಲ್ಲಿಯ ಗ್ರಾಮಸ್ಥರು ಮೋಂಬತ್ತಿ ಮೆರವಣಿಗೆಯೊಂದಿಗೆ ಸ್ವಾಗತ ಮಾಡಿ ತಮ್ಮ ತನು-ಮನ-ಧನ ಅರ್ಪಿಸುವ ಮೂಲಕ ಸಮ್ಮೇಳನ ಯಶಸ್ಸಿಗೆ ಸಹಕರಿಸಬೇಕು ಎಂದರು.
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…