ಚಾಮರಾಜನಗರ

ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ: ಸಿ.ಎಂ.ಸಿದ್ದರಾಮಯ್ಯ

ಚಾಮರಾಜನಗರ: ರಾಚಯ್ಯ ಅವರ ಮಾರ್ಗದರ್ಶನದಂತೆ ನಾನು ಶೋಷಿತರ ಪರವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಶನಿವಾರ(ಆ.10) ಮಾಜಿ ರಾಜ್ಯಪಾಲ ದಿ|| ಬಿ.ರಾಚಯ್ಯ ಅವರ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದರು.

ರಾಚಯ್ಯ ಅವರು ರಾಜ್ಯ ರಾಜಕಾರಣದ ಅತ್ಯಂತ ಮುತ್ಸದ್ದಿ ರಾಜಕಾರಣಿ. ಹೆಚ್ಚು ಮಾತಾಡುತ್ತಿರಲಿಲ್ಲ. ಬಡವರ ಪರವಾಗಿ ಹೆಚ್ಚೆಚ್ಚು ಕೆಲಸ ಮಾಡುತ್ತಿದ್ದರು ಎಂದರು.

ರಾಮಕೃಷ್ಣ ಹೆಗಡೆ ಅವರ ಮಂತ್ರಿ ಮಂಡಲದಲ್ಲಿ ಪ್ರಭಾವಿ ಆಗಿದ್ದ ರಾಚಯ್ಯನವರಿಗೆ, ಪ್ರತಿಭಾವಂತ, ಜನಪರ ಕಾಳಜಿಯುಳ್ಳ ರಾಜಕಾರಣಿಗಳನ್ನು ಹತ್ತಿರಕ್ಕೆ ಕರೆದು ಬೆಳೆಸುವ ಗುಣ ಇತ್ತು. ಹೆಗಡೆ ಮತ್ತು ರಾಚಯ್ಯ ಅವರು ನನ್ನನ್ನು ಕರೆದು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದರು. ಬಳಿಕ ನನ್ನನ್ನು ಮಂತ್ರಿ ಮಾಡಿದರು ಎಂದು ಇತಿಹಾಸ ಸ್ಮರಿಸಿಕೊಂಡರು.

ಅವತ್ತು ನಾನು ಮಂತ್ರಿ ಆಗದೇ ಹೋಗಿದ್ದರೆ ನಾನು ಇವತ್ತು ಎರಡನೇ ಬಾರಿ ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಇದೇ ಕೆಲವರಿಗೆ ಹೊಟ್ಟೆಯುರಿ ಎಂದು ತಮ್ಮ ಮೇಲೆ ಆರೋಪಿಸಿರುವವರಿಗೆ ಟೀಕಿಸಿದರು.

ಮೈಸೂರು, ಚಾಮರಾಜನಗರ ಜಿಲ್ಲೆಯ ಬಹುತೇಕ ಕಾಂಗ್ರೆಸ್ ಮುಖಂಡರು ರಾಚಯ್ಯನವರ ಪ್ರಾಡಕ್ಟ್ ಗಳು. ನಾನೂ ಕೂಡ ರಾಚಯ್ಯನವರ ಪ್ರಾಡಕ್ಟು ಎಂದರು.

ರಾಚಯ್ಯನವರು ನಡೆದಂತ ದಾರಿಯಲ್ಲೇ ನಡೆಯಪ್ಪಾ ಎಂದು ಅವರ ಪುತ್ರ ಶಾಸಕ ಕೃಷ್ಣಮೂರ್ತಿ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಕಿವಿ ಮಾತು ಹೇಳಿ, ಸದಾ ಬಡವರ ಪರವಾಗಿ ಇರಬೇಕು. ಯಾರನ್ನೂ ದ್ವೇಷಿಸಬಾರದು ಎಂದರು.

ಇವತ್ತು ನಾವೆಲ್ಲಾ ಶಾಸಕರಾಗಿರುವುದು, ಮಂತ್ರಿಗಳಾಗಿರುವುದು, ಮುಖ್ಯಮಂತ್ರಿಗಳಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದ. ರಾಚಯ್ಯನವರು ಸಂವಿಧಾನದ ಮಾರ್ಗದಲ್ಲಿ ನಡೆದರು. ಇವರು ಇವತ್ತಿನ ಯುವ ಪೀಳಿಗೆಗೂ ಮಾದರಿ ಎಂದರು.

ರಾಚಯ್ಯ ಸ್ಮಾರಕದಲ್ಲಿ IAS-IPS ತರಬೇತಿ ಕೇಂದ್ರ ಸ್ಥಾಪಿಸಲು ಸರ್ಕಾರದ ನೆರವನ್ನು ಶಾಸಕ ಕೃಷ್ಣಮೂರ್ತಿ ಅವರು ಕೇಳಿದ್ದಾರೆ. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಚಾಮರಾಜನಗರ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಲೂರು ಗ್ರಾಮದಲ್ಲಿ ಸ್ಮಾರಕ ಭವನ ನಿರ್ಮಿಸಲಾಗಿದೆ.

ನಮಗೆ ತಂಗಳು ಇರ್ತಿತ್ತು. ಇಡ್ಲಿ, ದೋಸೆ ಇರ್ತಿಲಿಲ್ಲ

ನಮಗೆ ಮನೆಯಲ್ಲಿ ತಂಗಳು ಇರ್ತಿತ್ತೇ ಹೊರತು, ಇಡ್ಲಿ, ದೋಸೆ, ಉಪ್ಪಿಟ್ಟು ಏನೂ ಇರ್ತಾ ಇರ್ಲಿಲ್ಲ. ರಾತ್ರಿ ಉಳಿದ ಮುದ್ದೆಗೆ ಮಜ್ಜಿಗೆ ಬೆರೆಸಿ ತಂಗಳು ತಿಂತಾ ಇದ್ವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆ ದಿನಗಳನ್ನು ಸ್ಮರಿಸಿದರು.

ರಾಯಚ್ಯನವರ ಸ್ಮಾರಕ‌ ಉದ್ಘಾಟನಾ ಭಾಷಣ ಶುರು ಮಾಡುವ ವೇಳೆಗೆ ಸಂಜೆ 4 ಗಂಟೆ ಆಗಿತ್ತು. ಊಟದ ಸಮಯ ತಡವಾದದ್ದನ್ನು ಪ್ರಸ್ತಾಪಿಸಿ ಕ್ಷಮೆ ಕೋರಿ ಭಾಷಣ ಆರಂಭಿಸಿದ ಮುಖ್ಯಮಂತ್ರಿಗಳು ಮೇಲಿನ‌ ಪ್ರಸಂಗ ನೆನಪಿಸಿಕೊಂಡರು.

ರಾಚಯ್ಯ ಅವರ ಮನೆಯಲ್ಲೂ ಇಡ್ಲಿ ದೋಸೆ ಇರ್ತಿಲಿಲ್ಲ ಅಂತ ಕಾಣ್ತದೆ. ಅವರೂ ನನ್ನಂಗೆ ತಂಗಳು ತಿಂದು ಗಟ್ಟಿಯಾದರು ಎಂದರು.

ಕಾರ್ಯಕ್ರಮದಲ್ಲಿ   ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕಾನೂನು ಸಚಿವ ಎಚ್.ಕೆ.ಪಾಟೀಲ್, ರಾಚಪ್ಪ ಅವರ ಪತ್ನಿ ಗೌರಮ್ಮ, ಸಂಸದರಾದ ಸುನಿಲ್ ಬೋಸ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಶಾಸಕರುಗಳಾದ ಎ.ಆರ್.ಕೃಷ್ಣಮೂರ್ತಿ, ಹೆಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago